News Karnataka Kannada
Friday, May 03 2024
ದೆಹಲಿ

ಕ್ರೀಡಾಪಟುಗಳೊಂದಿಗೆ ಮಾತುಕತೆಗೆ ಸಿದ್ದ: ಸಚಿವ ಠಾಕೂರ್‌

Ready to hold talks with sportspersons: Minister Thakur
Photo Credit : IANS

ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳೊಂದಿಗೆ ‘ಚರ್ಚೆ’ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ನಡೆಸಿದ ಸಂವಾದ ಯಾವುದೇ ಫಲ ನೀಡಿಲ್ಲ. ಗೃಹ ಸಚಿವರಿಂದ ತಮಗೆ ಬೇಕಾದ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದರು. ಈ ನಿಟ್ಟಿನಲ್ಲಿ ಟ್ವೀಟ್‌ ಮಹತ್ವ ಪಡೆದಿದೆ.

ಇದಕ್ಕೂ ಮುನ್ನ, ಮಂಗಳವಾರ, ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯ ಭಾಗವಾಗಿ, ದೆಹಲಿ ಪೊಲೀಸರು ಉತ್ತರ ಪ್ರದೇಶದ ಗೊಂಡಾದಲ್ಲಿರುವ ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಪೊಲೀಸರು ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

“ನಾವು ತನಿಖೆಯ ಭಾಗವಾಗಿ ಗೊಂಡಾಗೆ ಭೇಟಿ ನೀಡಿದ್ದೇವೆ ಮತ್ತು ಸಿಂಗ್ ಅವರ ಮನೆಯಲ್ಲಿ ಚಾಲಕ ಸೇರಿದಂತೆ ಅವರ ಸಹಚರರು ಮತ್ತು ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ತಂಡವು ಅವರ ಐಡಿಗಳನ್ನು ಪರಿಶೀಲಿಸಿದೆ ಮತ್ತು ಹೇಳಿಕೆಗಳನ್ನು ದಾಖಲಿಸುವಾಗ ಅವರ ವಿಳಾಸಗಳನ್ನು ಗಮನಿಸಿದೆ. ನಾವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು