ನವದೆಹಲಿ: ಉದ್ಯಮಿಯೊಬ್ಬರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು, ಒಂದು ವೇಳೆ ವಿಚಾರಣೆಗೆ ಕರೆದರೆ ಸಿಬಿಐ ಅಥವಾ ಸದನದ ಹಕ್ಕುಬಾಧ್ಯತಾ ಸಮಿತಿ ಮುಂದೆ ಹಾಜರಾಗಿ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
‘ವಿಚಾರಣೆಗೆ ಕರೆದರೆ ಬಿಜೆಪಿ ಸದಸ್ಯರೇ ಹೆಚ್ಚಿರುವ ಸಮಿತಿ ಮುಂದೆ ಹಾಜರಾಗುತ್ತೇನೆ. ಅದಾನಿ ನಿರ್ದೇಶಿತ ಮಾಧ್ಯಮ ಹಾಗೂ ಬಿಜೆಪಿಯ ಟ್ರೋಲ್ಗಳಿಗೆ ಉತ್ತರಿಸಲು ನನ್ನ ಬಳಿ ಸಮಯವಿಲ್ಲ. ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯ ಸಂಭ್ರಮದಲ್ಲಿದ್ದೇನೆ. ಶುಭೋ ಶಾಂತಿ’ ಎಂದು ಮಹುವಾ ಮೊಯಿತ್ರಾ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಕೆಡುಕು ಹಾಗೂ ಮುಜುಗರ ಉಂಟು ಮಾಡಲು ಪ್ರಯತ್ನಿಸಿದ್ದರು ಎಂದು ದುಬೆ ಅವರು ಸ್ಪೀಕರ್ಗೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ದೂರಿದ್ದಾರೆ.
I welcome answering questions to CBI & Ethics Committee (which has absolute majority of BJP members) if & when they call me. I have neither time nor interest to feed a Adani-directed media circus trial or answer BJP trolls.
I am enjoying Durga Puja in Nadia.
Shubho Sashthi .— Mahua Moitra (@MahuaMoitra) October 20, 2023