Categories: ದೆಹಲಿ

ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ: ಸಿಬಿಐ ದಾಳಿ

ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣ ಸಂಬಂಧಿಸಿದಂತೆ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದ್ದು, ಈ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಇದ್ದಾರೆ.

ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ. ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ:

ಸಿಬಿಐ ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

Chaitra Kulal

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago