News Karnataka Kannada
Saturday, May 18 2024
ದೆಹಲಿ

ಸನಾತನ ಧರ್ಮ ಎಂದರೆ ಅಸ್ಪೃಶ್ಯತೆ ಎಂದ ಪ್ರಕಾಶ್‌ ಅಂಬೇಡ್ಕರ್‌

sanatan-dharma-untouchability-prakash-ambedkar
Photo Credit : Twitter

ನವದೆಹಲಿ: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರ ಕರೊನಾ ಹೇಳಿಕೆ ದೇಶದೆಲ್ಲೆಡೆ ಆಕ್ರೋಶ ಸೃಷ್ಟಿಸಿದೆ. ಬಿಜೆಪಿ, ಬಲಪಂಥೀಯ ಸಂಘಟನೆಗಳು ಸ್ಟಾಲಿನ್‌ ಮೇಲೆ ಮುಗಿಬಿದ್ದಿವೆ.

ಈ ನಡುವೆ ಉದಯನಿಧಿ ದ್ವೇಷ ಭಾಷಣ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ಹೈಕೋರ್ಟ್ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಯೋಧರು ಸೇರಿದಂತೆ 262 ಗಣ್ಯ ನಾಗರಿಕರ ಗುಂಪು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ.

ಈ ಎಲ್ಲ ವಾದ ವಿವಾದಗಳ ನಡುವೆ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು, ಸನಾತನ ಧರ್ಮವನ್ನು ‘ಅಸ್ಪೃಶ್ಯತೆ’ಗೆ ಸಮಾನ ಎಂದು ವ್ಯಾಖ್ಯಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಅವರು, ”ಸನಾತನ ಧರ್ಮ= ಅಸ್ಪೃಶ್ಯತೆ” ಎಂದು ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅವರು ಸನಾತನ ಧರ್ಮದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಸನಾತನ ಧರ್ಮವು ಅಸ್ಪೃಶ್ಯತೆಯನ್ನು ನಂಬುತ್ತದೆ. ಹೀಗಿರುವಾಗ ನಾವು ಸನಾತನ ಧರ್ಮವನ್ನು ಹೇಗೆ ಒಪ್ಪಿಕೊಳ್ಳಬಹುದು ಎಂದು ಕೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು