ನವದೆಹಲಿ: ತಪ್ಪು ಮಾಹಿತಿ ನೀಡುವ ಜಾಹಿರಾತುಗಳ ವಿರುದ್ಧ ಹೊರಡಿಸಲಾಗಿದ್ದ ಆದೇಶವನ್ನು ಉಲ್ಲಂಘಿಸಿದ ಕಾರಣ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಾಬಾ ರಾಮ್ದೇವ್ ಒಡೆತನದ ಆಯುರ್ವೇದ ಕಂಪನಿಯಾದ ಪತಂಜಲಿಗೆ ಮುಂದಿನ ಆದೇಶದವರೆಗೆ ಔಷಧೀಯ ಉತ್ಪನ್ನಗಳ ಜಾಹಿರಾತು ನೀಡದಂತೆ ನ್ಯಾಯಾಲಯ ನಿರ್ಬಂಧಿಸಿತ್ತು.
ಜಾಹಿರಾತುಗಳಲ್ಲಿ ಅಲೋಪತಿ ವಿರುದ್ಧ ಪತಂಜಲಿ ತಪ್ಪು ಮಾಹಿತಿ ಪ್ರಚಾರ ಮಾಡುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಅರ್ಜಿ ದಾಖಲಿಸಿತ್ತು. ಅದರ ವಿಚಾರಣೆ ನಡೆಸಿ ಹೊರಡಿಸಲಾದ ಆದೇಶವನ್ನು ಪತಂಜಲಿ ಉಲ್ಲಂಘಿಸಿದ ಕಾರಣ ನೋಟಿಸ್ ನೀಡಲಾಗಿದೆ.
ಅಲೋಪತಿ ಔಷಧಗಳ ಬಗ್ಗೆ ಬಾಬಾ ರಾಮ್ದೇವ್ ವಿವಾದಾತ್ಮಕ ಹೇಳಿಕೆ ನೀಡಿದ್ದಷ್ಟೇ ಅಲ್ಲ, ನಿರ್ದಿಷ್ಟ ರೋಗವನ್ನು ಗುಣಪಡಿಸಬಲ್ಲ ಔಷಧಿ ಎಂದು ಹೇಳಿ ಪಂತಂಜಲಿ ಉತ್ಪನ್ನಗಳ ಜಾಹಿರಾತಿನಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದರು.
ಮುಂದಿನ ವಿಚಾರಣೆಯನ್ನು ಮಾ.೧೫ಕ್ಕೆ ಮುಂದೂಡಲಾಗಿದೆ.