ಹೊಸದಿಲ್ಲಿ: ಪಾಕಿಸ್ತಾನದ ಪ್ರಾದೇಶಿಕ ಜಲಪ್ರದೇಶದೊಳಗೆ ದಾರಿ ತಪ್ಪಿದ ನಂತರ ಭಾರತೀಯ ಮೀನುಗಾರರನ್ನು ಬಂಧಿಸುವ ವಿಷಯವನ್ನು ಪ್ರಸ್ತಾಪಿಸಿದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಇಂದು(ಆ.25) ನಿರಾಕರಿಸಿದೆ. ರಾಜಕೀಯ ವಿಷಯಗಳನ್ನು ರಾಜಕೀಯವಾಗಿಯೇ ವಿಂಗಡಿಸಲಾಗುವುದು ಎಂದು ಹೇಳಿದೆ.
ಮೀನುಗಾರರನ್ನು ಬಿಡುಗಡೆ ಮಾಡುವಂತೆ ಪಾಕಿಸ್ಥಾನಕ್ಕೆ ನಿರ್ದೇಶನಗಳನ್ನು ನೀಡಲಾಗುವುದಿಲ್ಲ ಮತ್ತು ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಈ ವಿಷಯವನ್ನು ನಿರ್ಧರಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.