News Karnataka Kannada
Tuesday, April 30 2024
ದೆಹಲಿ

ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

Security breach case: Mobile parts of accused found in Rajasthan
Photo Credit : News Kannada

ದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಲಲಿತ್ ಝಾ ಒಪ್ಪಿಕೊಂಡಿದ್ದ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು