ಕ್ರೈಮ್

ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಲಲಿತ್ ಝಾ ಒಪ್ಪಿಕೊಂಡಿದ್ದ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

Ashika S

Recent Posts

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

57 seconds ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

37 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

54 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago