News Karnataka Kannada
Thursday, May 02 2024
ದೆಹಲಿ

ಸಂಭಾವ್ಯ ದಾಳಿ ಭೀತಿ : ರಾಜೀವ್ ಕುಮಾರ್‌ಗೆ ಝಡ್ ಶ್ರೇಣಿ ಭದ್ರತೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ರಾಜೀವ್‌ ಕುಮಾರ್‌ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ
Photo Credit : NewsKarnataka

ನವದೆಹಲಿ:  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ರಾಜೀವ್‌ ಕುಮಾರ್‌ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಗೃಹ ಸಚಿವಾಲಯ ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ ತುಕಡಿಯನ್ನು ರಾಜೀವ್‌ ಕುಮಾರ್‌ ಅವರ ಭದ್ರತೆಗೆ ನಿಯೋಜಿಸುವಂತೆ ಆದೇಶ ನೀಡಿದೆ ಎಂದು ಪಿಟಿಯು ಸುದ್ದಿ ಸಂಸ್ಥೆಗೆ ಮೂಲಗಳು ತಿಳಿಸಿವೆ.

ಕಾಲ ಕಾಲಕ್ಕೆ ಸಂಭಾವ್ಯ ದಾಳಿ ಬೆದರಿಕೆ ಇರುವ ಗಣ್ಯರ ಹೆಸರನ್ನು ಹೊಂದಿರುವ ವರದಿಯನ್ನು ಕೇಂದ್ರೀಯ ಭದ್ರತಾ ಏಜೆನ್ಸಿಗಳು ಗೃಹ ಸಚಿವಾಲಯಕ್ಕೆ ನೀಡುತ್ತವೆ ಅದರಂತೆ ಈ ಬಾರಿ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರಿಗೆ ದಾಳಿ ಬೆದರಿಕೆ ಇರುವುದಾಗಿ ವರದಿ ನೀಡಿತ್ತು ಹಾಗಾಗಿ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು