ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸುತ್ತಿರುವ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದೆ.
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಯ ಸಮಯದಲ್ಲಿ ಸಾವಿರ ಸಲ ಜೈ ಶ್ರೀರಾಮ್ ಹೇಳಲಿ ಎಂದಿದ್ದ ಶಮಿಯನ್ನು ಬಂಗಾಳದ ಅಭ್ಯರ್ಥಿ ಮಾಡುವ ಮೂಲಕ ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆಯಲು ಸುಲಭವಾಗುತ್ತದೆ ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದ್ದು, ಪ್ರಮುಖ ಬಿಜೆಪಿ ಮುಖಂಡರು ಅವರನ್ನು ಸಂಪರ್ಕಿಸಿದ್ದಾರೆ.
ಬಸಿರ್ಹಾತ್ ಕ್ಷೇತ್ರದಿಂದ ಶಮಿಯನ್ನು ಕಣಕ್ಕಿಳಿಸುವ ಮೂಲಕ ಅಲ್ಪಸಂಖ್ಯಾತರ ಮತಗಳನ್ನು ಸುಲಭವಾಗಿ ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದೆ.