ದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಇದೀಗ ಮೋದಿ ಮತ್ತು ಅಮಿತ್ ಶಾ ಅವರನ್ನು ಹೊಗಳಿದ್ದಾರೆ.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ಕಿಡಿಕಾರುತ್ತಿದ್ದ ಶೆಹ್ಲಾ ರಶೀದ್ ಅವರು ಈ ಹಿಂದೆಯು ಮೋದಿ ಸರ್ಕಾರವನ್ನು ಹೊಗಳಿದ್ದರು. ಇದಕ್ಕೆ ಕಾರಣ ಮೋದಿ ಮತ್ತು ಅಮಿತ್ ಶಾ ಕಾಶ್ಮೀರದಲ್ಲಿ ಮಾಡಿದ ಮೋಡಿ.
ಕಾಶ್ಮೀರದಲ್ಲಿ ಮೋದಿ-ಶಾ ಮಾಡಿದ ಕೆಲಸವನ್ನು ಶ್ಲಾಘಿಸಿದ್ದಾರೆ. ಕಾಶ್ಮೀರ ಗಾಜಾ ಪಟ್ಟಿ ಅಲ್ಲ, ಅದು ತುಂಬಾ ಬದಲಾಗಿದೆ. ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ ತುಂಬಾ ಸುಧಾರಿಸಿದೆ. ಅಲ್ಲಿನ ಜನ ತುಂಬಾ ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನೀವು ಕಲ್ಲು ತೂರಾಟ ನಡೆಸುವವರನ್ನು ಎಂದಾದರೂ ಬೆಂಬಲಿಸಿದ್ದೀರಾ ಎಂದು ಶೆಹ್ಲಾ ಅವರನ್ನು ಈ ಸಂದರ್ಶನದಲ್ಲಿ ಕೇಳಲಾಯಿತು, ಉತ್ತರಿಸಿದ ರಶೀದ್ ಹೌದು ಅದು 2010ರಲ್ಲಿ ಬೆಂಬಲಿಸಿದ್ದೆ, ಆದರೆ ಈಗ ಮಾಡಲ್ಲ, ಕಾಶ್ಮೀರದ ಈಗಿನ ಪರಿಸ್ಥಿತಿ ತುಂಬಾ ಭಿನ್ನವಾಗಿದೆ.
ಸಾಮಾಜಿಕವಾಗಿ ಅನೇಕ ಅಭಿವೃದ್ಧಿಯಾಗಿದೆ. ಇದರ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ರಾಜಕೀಯ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ ಈ ಕಾರಣಕ್ಕೆ ನಾನು ಮೋದಿ ಸರ್ಕಾರಕ್ಕೆ ತುಂಬಾ ಕೃತಜ್ಞನಾಗಿದ್ದೇನೆ ಎಂದರು.