News Karnataka Kannada
Thursday, May 02 2024
ದೆಹಲಿ

ಗಡ್ಕರಿ ಅವರಿಂದ ಸಕಾರಾತ್ಮಕ ಸಲಹೆ ಪಡೆದಿದ್ದೇನೆ ಎಂದ ಶಿವಕುಮಾರ್

Shivakumar says he has received positive advice from Gadkari
Photo Credit : News Kannada

ನವದೆಹಲಿ: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ದೆಹಲಿ ಪ್ರವಾಸದಲ್ಲಿದ್ದು, ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದರು.

ಈ ವೇಳೆ ಗಡ್ಕರಿ ಅವರೊಂದಿಗೆ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಕುರಿತು ಚರ್ಚಿಸಿದರು. ಬೆಂಗಳೂರಿನಲ್ಲಿ ದಶಕಗಳಿಂದ ಜೀವಂತವಾಗಿರುವ ಸಂಚಾರ ದಟ್ಟಣೆ ಸಮಸ್ಯೆ ಕುರಿತು ಹೆದ್ದಾರಿ ಸಚಿವ ಗಡ್ಕರಿ ಅವರೊಂದಿಗೆ ಡಿ.ಕೆ. ಶಿವಕುಮಾರ್‌ ಚರ್ಚೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ರಾಜ್ಯಕ್ಕೆ ಕೇಂದ್ರ ಸರಕಾರ ಸೂಚಿಸಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಸಭೆ ಬಳಿಕ ಸುದ್ದಿಗಾರರಿಗೆ ವಿವರ ನೀಡಿ ಡಿ.ಕೆ. ಶಿವಕುಮಾರ್‌ ಗಡ್ಕರಿ ಅವರು ಸಕಾರಾತ್ಮಕ ರೀತಿಯಲ್ಲಿ ಕೆಲವು ಸಲಹೆ ನೀಡಿದ್ದಾರೆ. ಡಿಪಿಆರ್ ತಯಾರಿಸಲು ನಮಗೆ ಸೂಚಿಸಿದ್ದಾರೆ ಎಂದರು.

ಸುರಂಗ ಅಥವಾ ಮೇಲ್ಸೇತುವೆ ಅಥವಾ ಟ್ರಾಫಿಕ್ ಸರಾಗಗೊಳಿಸುವ ಯಾವುದೇ ಮಾರ್ಗಗಳ ನಿರ್ಮಾಣದ ಪ್ರಸ್ತಾವನೆಯೊಂದಿಗೆ ರಾಜ್ಯ ಸರ್ಕಾರ ಈಗಾಗಲೇ ಆಸಕ್ತರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಎಲ್ಲಾ ಪ್ರಸ್ತಾವನೆಗಳನ್ನು ಸ್ವೀಕರಿಸಿದ ನಂತರ ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇವೆ, ಅದು ಬೆಂಬಲಿಸಲು ಸಿದ್ಧವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು