ನವದೆಹಲಿ: ಹಲವು ದಿನಗಳ ಹೈಡ್ರಾಮಾ ಬಳಿಕ ಕಾಂಗ್ರೆಸ್ ಪಕ್ಷದ ಸಿಎಂ ಆಯ್ಕೆ ಕಸರತ್ತು ಪೂರ್ಣಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಎಐಸಿಸಿ ನಿರ್ಣಯ ಕೈಗೊಂಡಿದೆ. ಅದೇ ರೀತಿ ಡಿ.ಕೆ. ಶಿವಕುಮಾರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯಲಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಭಯ ನಾಯಕರೊಂದಿಗಿನ ಹಲವಾರು ಸುತ್ತಿನ ಸಭೆಗಳ ನಂತರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ತೀರ್ಮಾನಿಸಿದರು. ಗುರುವಾರ ಸಂಜೆ 7ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ನೂತನ ಸಿಎಂ ಹೆಸರು ಘೋಷಣೆ ನಡೆಯಲಿದೆ. ಮೇ 20 ರಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.