ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶನಿವಾರ ಮಧ್ಯಾಹ್ನ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಸಿಸೋಡಿಯಾ ಅವರನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರಲಾಗುವುದು ಎಂದು ಮೂಲಗಳು ತಿಳಿಸಿವೆ.
ಆಮ್ ಆದ್ಮಿ ಪಕ್ಷದ ಮಾಜಿ ಸಚಿವರು ತನಿಖೆಗೆ ಸಮರ್ಪಕವಾಗಿ ಸಹಕರಿಸುತ್ತಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.
ತನಿಖಾ ಸಂಸ್ಥೆಯು ಜನವರಿಯಲ್ಲಿ ಸಿಸೋಡಿಯಾ ಅವರ ಕಚೇರಿಯಿಂದ ಕಂಪ್ಯೂಟರ್ ವಶಪಡಿಸಿಕೊಂಡಿತ್ತು. ಈ ವೇಳೆ ಕಂಪ್ಯೂಟರ್ನಿಂದ ಫೈಲ್ಗಳು ಮತ್ತು ಇತರ ಡೇಟಾಗಳನ್ನು ಅಳಿಸಿರುವುದು ಕಂಡುಬಂದಿತ್ತು. ಪ್ರಸ್ತುತ ಡಿಲೀಟ್ ಆದ ಫೈಲ್ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದವರು ಮರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.