News Karnataka Kannada
Saturday, May 18 2024
ದೆಹಲಿ

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಎಲ್ಲಿ ಎನ್ನುವ ಮಾಹಿತಿ ಇಲ್ಲ.
Photo Credit : NewsKarnataka

ನವದೆಹಲಿ: ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಎಲ್ಲಿ ಎನ್ನುವ ಮಾಹಿತಿ ಇಲ್ಲ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ, ವೃದ್ಧ ಮನೆಯ ಹೊರಗೆ ಕರ್ಚಿಯ ಮೇಲೆ ಕುಳಿತಿದ್ದಾಗ, ಮಗ ಬಂದು ಅವನನ್ನು ಹೊಡೆಯಲು ಪ್ರಾರಂಭಿಸಿದ್ದಾನೆ. ಬಲವಾಗಿ ಗುದ್ದಿದ ಬಳಿಕ ಮುದುಕ ಪ್ರಜ್ಙೆ ತಪ್ಪಿ ಬೀಳುತ್ತಾನೆ. ಆದರೂ ತೃಪ್ತನಾಗದ ಮಗ ತಂದೆಯ ಮುಖಕ್ಕೂ ಕಾಲಿನಿಂದ ಹೊಡೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೋಡಿ ಸೋಷಿಯಲ್‌ ಮೀಡಿಯಾ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರು ವಿಡಿಯೋ ನೋಡಿ ಸೋಷಿಯಲ್‌ ಮೀಡಿಯಾ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್‌ ಬಿಜೆಪಿ ನಾಯಕ ಡಾ. ಧನಂಜಯ್‌ ಪುತುಶ್‌ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಗನ ಈ ನೋವಿನ ಹೊಡೆತದಿಂದ ತಂದೆ ಜರ್ಜರಿತರಾಗಿದ್ದಾರೆ ಮತ್ತು ಅವರು ಕೆಲವು ದಿನಗಳ ನಂತರ ನಿಧನರಾದರು ಎಂದು ಬರೆದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು