ನವದೆಹಲಿ: ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ಯಾವುದೇ ಅಜೆಂಡಾ ಹೊಂದಿಲ್ಲದಿರುವುದನ್ನು ಆಕ್ಷೇಪಿಸಿ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಅಲ್ಲದೆ ಪತ್ರದಲ್ಲಿ ವಿಶೇಷ ಅಧಿವೇಶನದಲ್ಲಿ ಕೇಂದ್ರ-ರಾಜ್ಯ ಸಂಬಂಧ, ಕೋಮುವಾದ ಮತ್ತು ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಂತೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.
ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಸರ್ಕಾರ ಮುಂದಿಡಬಹುದು ಎಂದು ಮೂಲಗಳು ಹೇಳುತ್ತವೆ. ವಿಶೇಷ ಅಧಿವೇಶನಕ್ಕೆ ಸರ್ಕಾರ ಯಾವುದೇ ಅಜೆಂಡಾ ಪ್ರಕಟಿಸದಿರುವುದು ಊಹಾಪೋಹಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.