News Karnataka Kannada
Monday, April 29 2024
ದೆಹಲಿ

ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ಅರ್ಥಶಾಸ್ತ್ರದ ಅನಕ್ಷರಸ್ಥ ಎಂದ ಸುಬ್ರಮಣಿಯನ್ ಸ್ವಾಮಿ

Subramanian Swamy calls PM Narendra Modi 'illiterate' of economics
Photo Credit : IANS

ನವೆದಹಲಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್‌, ಬಿಜೆಪಿಯ ಹಿರಿಯ ನಾಯಕರನ್ನು ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ. ಅದೇ ರೀತಿ ಪ್ರಧಾನಿ ಅವರ ನೇತೃತ್ವದ ಬಿಜೆಪಿ ಸರ್ಕಾರ ವೈಫಲ್ಯಗಳನ್ನು ಟ್ವೀಟ್‌ ಮೂಲಕ ಹೊರಹಾಕುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಒಂದು ಈಗ ಒಂದು ಹೆಜ್ಜೆ ಮುಂದು ಹೋಗಿರುವ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ”ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ’ ಎಂದು ಗೇಲಿ ಮಾಡಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು