ನವದೆಹಲಿ: ಮೂತ್ರಪಿಂಡ ಬಳಸಿ ವೈಫಲ್ಯದಿಂದ ಬಳಲುತ್ತಿದ್ದ 39 ವರ್ಷದ ರೋಗಿಯೊಬ್ಬರಿಗೆ ದೆಹಲಿಯ ಸಫ್ದಜಂಗ್ ಆಸ್ಪತ್ರೆಯಲ್ಲಿ ರೊಬೊ ಬಳಸಿ ಯಶಸ್ವಿಯಾಗಿ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಯನ್ನು ನಡಿಸಿದ್ದಾರೆ.
ದಾನಿಗಳ ನಿರೀಕ್ಷೆಯಲ್ಲಿದ್ದ ಉತ್ತರ ಪ್ರದೇಶದ ಫರೂಕಾಬಾದ್ ಗ್ರಾಮದ ವ್ಯಕ್ತಿಗೆ ಅವರ ಪತ್ನಿ ಮೂತ್ರಪಿಂಡ ದಾನ ಮಾಡಿದ್ದಾರೆ. ಡಯಾಲಿಸಿಸ್ನಲ್ಲಿ ಈ ವ್ಯಕ್ತಿಗೆ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಯನ್ನು ಡಾ. ಅನೂಪ್ ಕುಮಾರ್ ನೇತೃತ್ವ ಸಫದರ್ಜಂಗ್ ಆಸ್ಪತ್ರೆ ಮತ್ತು ವಿಎಂಎಂಸಿ ವೈದ್ಯರ ತಂಡ ನಡೆಸಿದೆ. ಇದರಲ್ಲಿ ರೊಬೊಟಿಕ್ಸ್ ಹಾಗೂ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸಕ ತಜ್ಞರು ಇದ್ದರು.
ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಡುವ ಸರ್ಕಾರಿ ಆಸ್ಪತ್ರೆಯಲ್ಲಿ ರೊಬೊ ಬಳಿಸಿ ನಡೆಸಿದ 2ನೇ ಶಸ್ತ್ರಚಿಕಿತ್ಸೆ ಇದು ಎಂದು ಅಲ್ಲಿನ ವೈದ್ಯರು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ʻಮೂತ್ರಪಿಂಡ ಚಿಕಿತ್ಸಾ ವಿಭಾಗದ ಡಾ. ಹಿಮಾಂಶು ವರ್ಮಾ, ಅರಿವಳಿಕೆ ತಜ್ಞ ಡಾ. ಮಧು ದಯಾಳ್ , ವಿಎಂಎಂಸಿ ಪ್ರಾಧ್ಯಾಪಕ ಡಾ. ಬಿ.ಎಲ್. ಶೆರ್ವಾಲ್ ಅವರು ಇದರಲ್ಲಿ ಪಾಲ್ಗೊಂಡಿದ್ದರುʼ ಎಂದು ಡಾ. ಅನೂಪ್ ತಿಳಿಸಿದ್ದಾರೆ.
ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…