ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆ ಮಾಡಿದ್ದು ನಮ್ಮ ಗ್ಯಾಂಗ್ ಸದಸ್ಯರು ಎಂದು ಜೈಲಿನಲ್ಲಿರುವ ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೇಳಿದ್ದಾನೆ.
ಫೇಸ್ ಬುಕ್ ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಾಕಲಾದ ಪೋಸ್ಟ್ನಲ್ಲಿ ದರೋಡೆಕೋರರಾದ ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿಡ್ಖೇರಾ ಅವರ ಹತ್ಯೆಯಲ್ಲಿ ಸುಖ ಡುನುಕೆ ಎಂದೂ ಕರೆಯಲ್ಪಡುವ ಸುಖದೂಲ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿಕೊಂಡಿದ್ದು ಇದರ ಸೇಡು ತೀರಿಸಿಕೊಳ್ಳಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಯೋಜನೆ ರೂಪಿಸಿ ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ.
2017 ರಲ್ಲಿ ನಕಲಿ ಪಾಸ್ಪೋರ್ಟ್ನಲ್ಲಿ ಪಂಜಾಬ್ನ ಮೊಗಾದಿಂದ ಕೆನಡಾಕ್ಕೆ ಪಲಾಯನ ಮಾಡಿದ ಡುನೆಕೆ “ಎ” ವರ್ಗದ ದರೋಡೆಕೋರನಾಗಿದ್ದ. ಆತ ಭಯೋತ್ಪಾದಕ ಅರ್ಷ್ದೀಪ್ ದಲ್ಲಾನ ನಿಕಟ ಸಹಚರನಾಗಿದ್ದ ಮತ್ತು ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಈತನೂ ಒಬ್ಬರಾಗಿದ್ದ. ಬುಧವಾರ ರಾತ್ರಿ ಈತನನ್ನು ಹತ್ಯೆ ಮಾಡಲಾಗಿದೆ.