News Karnataka Kannada
Saturday, May 11 2024
ದೆಹಲಿ

ಸೆ.1ಕ್ಕೆ ‘ಕಾವೇರಿ ನೀರು ವಿವಾದ’ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Supreme Court adjourns hearing on Cauvery water dispute to September 1
Photo Credit : News Kannada

ನವದೆಹಲಿ: ಕಾವೇರಿ ನದಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಸಲಾಯಿತು. ಬಳಿಕ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಲಾಗಿದೆ.

ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಸೋಮವಾರ ಉಭಯ ರಾಜ್ಯಗಳ ಸಭೆ ನಡೆಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.

ಅಲ್ಲದೆ ಸಭೆಯಲ್ಲಿ ಎರಡು ರಾಜ್ಯಗಳ ಜಲಾಶಯಗಳ ನೀರಿನ ವಾಸ್ತವ ಸ್ಥಿತಿ ಕುರಿತು ವರದಿ ಪಡೆದು ಸಲ್ಲಿಸಲು ಸೂಚಿಸಲಾಗಿದೆ.

ಸುಪ್ರೀಂ ನಲ್ಲಿ ಕರ್ನಾಟಕ ಪರ ಹಿರಿಯ ವಕೀಲ ಶ್ಯಾಮ ದಿವಾನ್ ಮತ್ತು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ವಾದ ಮಂಡಿಸಿರು. ಉಭಯ ರಾಜ್ಯಗಳ ವಾದ ಆಲಿಸಿದ ನ್ಯಾಯಪೀಠ, ಉಭಯ ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹದ ಬಗ್ಗೆ ವಾಸ್ತವ ವರದಿ ಸಲ್ಲಿಸುವಂತೆ ಹೇಳಿತು. ಬಳಿಕ ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ ಮುಂದೂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು