ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುವಂತೆ ಲೋಕಸಭೆ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ರಜಾಕಾಲದ ಪೀಠವು ಅರ್ಜಿದಾರರಿಗೆ ಹೀಗೆ ಹೇಳಿದೆ. ಅಂತಹ ಅರ್ಜಿ ಹಿಡಿದು ಅವು ಇಲ್ಲಿಗೇಕೆ ಬಂದಿದ್ದಾರೆ ಎಂದು ಪ್ರಶ್ನಿಸಿದೆ. ಅಲ್ಲದೆ 32 ನೇ ವಿಧಿಯ ಅಡಿಯಲ್ಲಿ ಅದನ್ನು ಅರ್ಜಿ ಪರಿಗಣಿಸಲು ನ್ಯಾಯಾಲಯವು ಆಸಕ್ತಿ ಹೊಂದಿಲ್ಲ ಎಂದು ಒತ್ತಿ ಹೇಳಿದರು. ಅಲ್ಲದೆ ಕಲಂ 79 ಇಲ್ಲಿ ಹೇಗೆ ಪ್ರಸ್ತುತವಾಗುತ್ತದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.
ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುತ್ತಾರೆ. ಹೀಗಾಗಿ ಪ್ರಧಾನಿ ಕಟ್ಟಡ ಉದ್ಘಾಟಿಸುತ್ತಿರುವುದು ಸಂಪೂರ್ಣವಾಗಿ ವಿಧಿ 79 ಮತ್ತು 87 ಅನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸಿ.ಆರ್. ಜಯಾ ಸುಕಿನ್ ಹೇಳಿದರು. ಅಲ್ಲದೆ ರಾಷ್ಟ್ರಾಧ್ಯಕ್ಷರು ಸಂಸತ್ತಿನ ಮುಖ್ಯಸ್ಥರಾಗಿರುವುದರಿಂದ ಅವರು ಕಟ್ಟಡವನ್ನು ಉದ್ಘಾಟಿಸಬೇಕು ಎಂದು ವಾದಿಸಿದರು. ಪೀಠವು ಅರ್ಜಿ ಸ್ವೀಕರಿಸಲು ನಿರಾಕರಿಸಿದ ನಂತರ, ಸುಕಿನ್ ಅರ್ಜಿಯನ್ನು ಹಿಂಪಡೆಯಲು ಒಪ್ಪಿಕೊಂಡರು. ವಕೀಲರಾದ ಸಿ.ಆರ್.ಜಯಾ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳಾದ ಲೋಕಸಭೆ ಸಚಿವಾಲಯ, ಭಾರತ ಕೇಂದ್ರ, ಗೃಹ ಸಚಿವಾಲಯ ಮತ್ತು ಭಾರತ ಕೇಂದ್ರ, ಕಾನೂನು ಮತ್ತು ನ್ಯಾಯ ಸಚಿವಾಲಯವು ಸಂವಿಧಾನವನ್ನು ಉಲ್ಲಂಘಿಸಿದೆ, ಸಂವಿಧಾನವನ್ನು ಗೌರವಿಸುತ್ತಿಲ್ಲ ಎಂದು ಉಲ್ಲೇಕಿಸಿದ್ದರು.
ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್…
: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು…
ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…
ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.