News Karnataka Kannada
Thursday, May 02 2024
ದೆಹಲಿ

ಅಯೋಧ್ಯೆ ಕಾರ್ಯಕ್ರಮದ ಪ್ರಸಾರಕ್ಕೆ ನಿಷೇಧ ಹೇರಿದ ತ.ನಾಡು ಸರ್ಕಾರ: ವಿತ್ತ ಸಚಿವೆ ಅಸಮಾಧಾನ

ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ನೇರಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದ್ದು, ಈ ಹಿಂದೂ ವಿರೋಧಿ ಕ್ರಮವನ್ನು ಬಲವಾಗಿ ಖಂಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Photo Credit : News Kannada

ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ನೇರಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದ್ದು, ಈ ಹಿಂದೂ ವಿರೋಧಿ ಕ್ರಮವನ್ನು ಬಲವಾಗಿ ಖಂಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅವರು, ತಮಿಳುನಾಡಿನಲ್ಲಿ ಶ್ರೀರಾಮನಿಗೆ 200ಕ್ಕೂ ಹೆಚ್ಚು ದೇವಾಲಯಗಳಿವೆ. ಎಚ್‍ಆರ್ ಅಂಡ್ ಸಿಇ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ/ಭಜನೆ/ಪ್ರಸಾದ/ಅನ್ನದಾನಕ್ಕೆ ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ನೇರ ಪ್ರಸಾರ ವೀಕ್ಷಿಸುವ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ ಮತ್ತು ದ್ವೇಷಪೂರಿತ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು