News Karnataka Kannada
Wednesday, May 08 2024
ದೆಹಲಿ

ಮಮತಾಗೆ ಹಿನ್ನಡೆ, 25,000 ಶಿಕ್ಷಕರ ನೇಮಕಾತಿ ರದ್ದು, ಸಂಬಳ ಮರಳಿಸಿ : ಹೈಕೋರ್ಟ್ ಆದೇಶ

ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ಮಾಡಿದ್ದ ಶಿಕ್ಷಕರ ನೇಮಕಾತಿಯನ್ನು ಕೋಲ್ಕತಾ ಹೈಕೋರ್ಟ್‌ ರದ್ದುಗೊಳಿಸಿದ್ದು, ಇದುವರೆಗೆ ಪಡೆದ ಸಂಬಳವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶ ನೀಡಿದೆ. ಇದು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.
Photo Credit : NewsKarnataka

ನವದೆಹಲಿ: ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ಮಾಡಿದ್ದ ಶಿಕ್ಷಕರ ನೇಮಕಾತಿಯನ್ನು ಕೋಲ್ಕತಾ ಹೈಕೋರ್ಟ್‌ ರದ್ದುಗೊಳಿಸಿದ್ದು, ಇದುವರೆಗೆ ಪಡೆದ ಸಂಬಳವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶ ನೀಡಿದೆ. ಇದು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನೇಮಕಗೊಂಡಿದ್ದ ಸುಮಾರು 25,753 ಶಿಕ್ಷಕರು ಇದೀಗ ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದು, ಜೊತೆಗೆ ಕರ್ತವ್ಯಕ್ಕೆ ಹಾಜರಾಗಿದ್ದ ದಿನದಿಂದ ಹಿಡಿದು ಈವರೆಗೆ ಪಡೆದ ಸಂಬಳವನ್ನು ಶೇ.12ರಷ್ಟು ಬಡ್ಡಿದರದೊಂದಿಗೆ ವಾಪಸ್‌ ಮರಳಿಸುವಂತೆ ಹೈಕೋರ್ಟ್‌ ಸಂದೇಶ ರವಾನಿಸಿದೆ.

ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು ನಾಲ್ಕು ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದು ನ್ಯಾಯಮೂರ್ತಿ ದೇಬಂಗ್ಸು ಬಸಾಕ್‌ ಮತ್ತು ನ್ಯಾಯಮೂರ್ತಿ ಶಬ್ಬರ್‌ ರಶೀದಿ ಅವರನ್ನೊಳಗೊಂಡ ಪೀಠ ಆದೇಶ ನೀಡಿದೆ. ಅಷ್ಟೇ ಅಲ್ಲ ಈ ಶಿಕ್ಷಕರ ಸಂಬಳ ವಸೂಲಿ ಮಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು