ನವದೆಹಲಿ: ತೆಲಂಗಾಣದ ವಿಧಾನಸಭೆ ಚುನಾವಣೆಗೆ ಕೇವಲ ಹದಿನೈದು ದಿನಗಳು ಬಾಕಿ ಉಳಿದಿದೆ. ಈ ನಡುವೆ ಹಲವು ರಾಜಕೀಯ ಬೆಳವಣಿಗೆಗಳು ಅಲ್ಲಿ ನಡೆದಿವೆ. ಕೆಲವೇ ದಿನಗಳ ಹಿಂದೆ ಟ ಕಮ್ ರಾಜಕಾರಣಿ ವಿಜಯಶಾಂತಿ ಬಿಜೆಪಿ ತೊರೆದಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ಪ್ರಚಾರ ಮತ್ತು ಯೋಜನಾ ಸಮಿತಿಯ ಮುಖ್ಯ ಸಂಯೋಜಕಿಯಾಗಿ ವಿಜಯಶಾಂತಿ ಅವರನ್ನುನೇಮಕ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಅವರು ತೆಲಂಗಾಣ – 2023 ರ ವಿಧಾನಸಭಾ ಚುನಾವಣೆ ಪ್ರಚಾರ ಮತ್ತು ಯೋಜನಾ ಸಮಿತಿಯ ಮುಖ್ಯ ಸಂಯೋಜಕರಾಗಿ ವಿಜಯಶಾಂತಿ ಅವರನ್ನು ನೇಮಕ ಮಾಡುವ ಪ್ರಸ್ತಾವನೆ ಕಳುಹಿಸಿದ್ದು ತಕ್ಷಣವೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ.
ವಿಜಯಶಾಂತಿ ಈ ವಾರದ ಆರಂಭದಲ್ಲಿ ಆಡಳಿತಾರೂಢ ಬಿಆರ್ಎಸ್ ತೊರೆದು ಶುಕ್ರವಾರ ತೆಲಂಗಾಣದಲ್ಲಿ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.