News Karnataka Kannada
Sunday, May 05 2024
ದೆಹಲಿ

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅಣಕಿಸಿದ ಟಿಎಂಸಿ ಸಂಸದ: ವಿಡಿಯೋ ನೋಡಿ

TMC MP mocks Vice President Jagdeep Dhankhar
Photo Credit : News Kannada

ನವದೆಹಲಿ: ಸಂಸತ್‌ ಅಧಿವೇಶನ ವೇಳೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ತೃಣಮೂಲ ಕಾಂಗ್ರೆಸ್‌ನ ಅಮಾನತುಗೊಂಡ ಸಂಸದ ಕಲ್ಯಾಣ್ ಬ್ಯಾನರ್ಜಿ‌ ಅವರು ರಾಜ್ಯಸಭಾ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರನ್ನು ಅನುಕರಣೆ ಮಾಡಿದ್ದಾರೆ. ಕಲ್ಯಾಣ್ ಬ್ಯಾನರ್ಜಿ ಈ ರೀತಿ ಮಾಡುವಾಗ ಜತೆಗಿದ್ದ ಸಂಸದರು ನಗುತ್ತಿರುವುದು ವಿಡಿಯೊದಲ್ಲಿದೆ. ನನ್ನ ಬೆನ್ನುಮೂಳೆಯು ತುಂಬಾ ನೇರವಾಗಿದೆ, ನಾನು ತುಂಬಾ ಎತ್ತರವಾಗಿದ್ದೇನೆ ಎಂದು ಕಲ್ಯಾಣ್ ಬ್ಯಾನರ್ಜಿ ಹೇಳುತ್ತಿರುವುದು ವಿಡಿಯೊದಲ್ಲಿ ಕೇಳಿಸುತ್ತದೆ.

ಬಿಜೆಪಿ ವಿಡಿಯೊವನ್ನು ಹಂಚಿಕೊಂಡಿದ್ದು, ಉಪರಾಷ್ಟ್ರಪತಿಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ಟೀಕಿಸಿದೆ. ಪ್ರತಿಪಕ್ಷದ ಸಂಸದರನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ದೇಶವು ಆಶ್ಚರ್ಯ ಪಡುತ್ತಿದ್ದರೆ, ಕಾರಣ ಇಲ್ಲಿದೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಲೇವಡಿ ಮಾಡಿದರು, ಆದರೆ ರಾಹುಲ್ ಗಾಂಧಿ ಅವರನ್ನು ನಗುತ್ತಾ ಹುರಿದುಂಬಿಸಿದರು. ಅವರು ಸದನದಲ್ಲಿ ಎಷ್ಟು ಅಜಾಗರೂಕ ಮತ್ತು ಉಲ್ಲಂಘನೆ ಮಾಡಿದ್ದಾರೆಂದು ಯಾರಾದರೂ ಊಹಿಸಬಹುದು ಎಂದು ವಿಡಿಯೊದ ಜತೆಗಿನ ಬರಹದಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು