ದೆಹಲಿ

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅಣಕಿಸಿದ ಟಿಎಂಸಿ ಸಂಸದ: ವಿಡಿಯೋ ನೋಡಿ

ನವದೆಹಲಿ: ಸಂಸತ್‌ ಅಧಿವೇಶನ ವೇಳೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ತೃಣಮೂಲ ಕಾಂಗ್ರೆಸ್‌ನ ಅಮಾನತುಗೊಂಡ ಸಂಸದ ಕಲ್ಯಾಣ್ ಬ್ಯಾನರ್ಜಿ‌ ಅವರು ರಾಜ್ಯಸಭಾ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರನ್ನು ಅನುಕರಣೆ ಮಾಡಿದ್ದಾರೆ. ಕಲ್ಯಾಣ್ ಬ್ಯಾನರ್ಜಿ ಈ ರೀತಿ ಮಾಡುವಾಗ ಜತೆಗಿದ್ದ ಸಂಸದರು ನಗುತ್ತಿರುವುದು ವಿಡಿಯೊದಲ್ಲಿದೆ. ನನ್ನ ಬೆನ್ನುಮೂಳೆಯು ತುಂಬಾ ನೇರವಾಗಿದೆ, ನಾನು ತುಂಬಾ ಎತ್ತರವಾಗಿದ್ದೇನೆ ಎಂದು ಕಲ್ಯಾಣ್ ಬ್ಯಾನರ್ಜಿ ಹೇಳುತ್ತಿರುವುದು ವಿಡಿಯೊದಲ್ಲಿ ಕೇಳಿಸುತ್ತದೆ.

ಬಿಜೆಪಿ ವಿಡಿಯೊವನ್ನು ಹಂಚಿಕೊಂಡಿದ್ದು, ಉಪರಾಷ್ಟ್ರಪತಿಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ಟೀಕಿಸಿದೆ. ಪ್ರತಿಪಕ್ಷದ ಸಂಸದರನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ದೇಶವು ಆಶ್ಚರ್ಯ ಪಡುತ್ತಿದ್ದರೆ, ಕಾರಣ ಇಲ್ಲಿದೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಲೇವಡಿ ಮಾಡಿದರು, ಆದರೆ ರಾಹುಲ್ ಗಾಂಧಿ ಅವರನ್ನು ನಗುತ್ತಾ ಹುರಿದುಂಬಿಸಿದರು. ಅವರು ಸದನದಲ್ಲಿ ಎಷ್ಟು ಅಜಾಗರೂಕ ಮತ್ತು ಉಲ್ಲಂಘನೆ ಮಾಡಿದ್ದಾರೆಂದು ಯಾರಾದರೂ ಊಹಿಸಬಹುದು ಎಂದು ವಿಡಿಯೊದ ಜತೆಗಿನ ಬರಹದಲ್ಲಿ ಹೇಳಲಾಗಿದೆ.

Gayathri SG

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

9 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

45 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago