ಹೊಸದಿಲ್ಲಿ: ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ಮಾಡಿರುವ ದ್ವೇಷ ಭಾಷಣ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ಹೈಕೋರ್ಟ್ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಯೋಧರು ಸೇರಿದಂತೆ 262 ಗಣ್ಯ ನಾಗರಿಕರ ಗುಂಪು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಸ್ಟಾಲಿನ್ ಅವರ ಹೇಳಿಕೆ ದ್ವೇಷ ಭಾಷಣಕ್ಕೆ ಸಮಾನವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ದ್ವೇಷ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳಲು ನಿರಾಕರಿಸಿದೆ. ಬದಲಿಗೆ ಅವರ ಹೇಳಿಕೆಗಳನ್ನು ಸಮರ್ಥಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರ ನಾಯಕರ ವರ್ತನೆ ನ್ಯಾಯಾಲಯದ ಆದೇಶಗಳನ್ನು ಅವಮಾನಿಸಿದ್ದು, ಕಾನೂನನ್ನು ದುರ್ಬಲಗೊಳಿಸಿದೆ. ಹಾಗಾಗಿ ಸುಪ್ರೀಂ ಕೋರ್ಟ್ ನಿಂದನೆಯ ಸುಮೋಟೋ ಅರ್ಜಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಅರ್ಜಿಯಲ್ಲಿ ಹೇಳಿದೆ.