News Karnataka Kannada
Friday, May 03 2024
ದೆಹಲಿ

‘ವಸುಧೈವ ಕುಟುಂಬಕಂ’ ಜಿ 20 ಸಭೆಯ ಮೂಲ ಉದ್ದೇಶ: ಪ್ರಧಾನಿ ಮೋದಿ

'Vasudhaiva Kutumbakam' is the basic objective of G20 meeting: PM Modi
Photo Credit : IANS

ನವದೆಹಲಿ: “ನಮ್ಮ (ಭಾರತ-ಇಂಡೋನೇಷ್ಯಾ) ಪಾಲುದಾರಿಕೆಯು ನಾಲ್ಕನೇ ದಶಕವನ್ನು ಪ್ರವೇಶಿಸುತ್ತಿದೆ. ಆಸಿಯಾನ್ ಒಕ್ಕೂಟ ಜಾಗತಿಕ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಇಂಡೋನೇಷ್ಯಾದ ಜಕಾರ್ತದಲ್ಲಿ ಆಸಿಯಾನ್-ಭಾರತ ಶೃಂಗಸಭೆಯನ್ನು ಉದ್ದೇಶಿಸಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಜಾಗತಿಕ ಅನಿಶ್ಚಿತತೆಯ ವಾತಾವರಣದಲ್ಲಿಯೂ ನಾವು ಪರಸ್ಪರ ಸಹಕಾರ, ಒಗ್ಗಟ್ಟಿನಿಂದ ಸ್ಥಿರ ಪ್ರಗತಿ ಸಾಧಿಸುತ್ತಿದ್ದೇವೆ. ಇದು ನಮ್ಮ ಬಾಂಧವ್ಯದ ಶಕ್ತಿಗೆ ಸಾಕ್ಷಿಯಾಗಿದೆ ಎಂದರು.

“‘ವಸುಧೈವ ಕುಟುಂಬಕಂ’ – ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಇದು ಭಾರತದ G20 ಸಮ್ಮೇಳನದ ಮುಖ್ಯ ವಿಚಾರವಾಗಿದೆ. ಅದೇ ರೀತಿ ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಪ್ರಾದೇಶಿಕ ಒಗ್ಗಟ್ಟನ್ನು ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ. ಈ ಮೊದಲು ಬುಧವಾರ ಶೃಂಗಸಭೆಗೆ ಆಗಮಿಸಿದ ಪ್ರಧಾನಿಯನ್ನು ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು