News Karnataka Kannada
Wednesday, May 01 2024
ದೆಹಲಿ

ಸಂತ್ರಸ್ತರ ಕುಟುಂಬ ಅನಾನುಕೂಲತೆ ಎದುರಿಸುವಂತಾಗಬಾರದು: ಪ್ರಧಾನಿ ನರೇಂದ್ರ ಮೋದಿ ಸೂಚನೆ

Victims' families should not be inconvenienced: Prime Minister Narendra Modi instructs
Photo Credit :

ನವದೆಹಲಿ: ಭೀಕರ ರೈಲು ಅಪಘಾತ ಸಂಭವಿಸಿದ ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿದರು. ಘಟನೆಯಲ್ಲಿ ಕನಿಷ್ಠ 261 ಮಂದಿ ಬಲಿಯಾಗಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಿಂದ ಒಡಿಶಾಗೆ ತೆರಳುವ ಮೊದಲು, ಶುಕ್ರವಾರ ಸಂಜೆ ಬಹಾನಗರ್ ಬಜಾರ್ ರೈಲು ನಿಲ್ದಾಣದಲ್ಲಿ ದುರಂತ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ದುರ್ಘಟನೆಯ ಸ್ಥಳದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳನ್ನು ಮೋದಿ ಪರಿಶೀಲಿಸಿದರು. ಸ್ಥಳೀಯ ಅಧಿಕಾರಿಗಳು, ವಿಪತ್ತು ಪರಿಹಾರ ಪಡೆಗಳ ಸಿಬ್ಬಂದಿ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಸ್ಥಳದಿಂದಲೇ ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ ಮೋದಿ ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಹೇಳಿದರು.

ಸಂತ್ರಸ್ತ ಕುಟುಂಬಗಳು ಅನಾನುಕೂಲತೆಯನ್ನು ಎದುರಿಸದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಪ್ರಧಾನಿ ಸೂಚಿಸಿದರು. ಮುಂಜಾನೆ ಬಾಲಸೋರ್ ತಲುಪಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಬಗ್ಗೆ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಬಗ್ಗೆ ಪ್ರಧಾನಿಗೆ ವಿವರಿಸಿದರು. ಅಪಘಾತ ನಡೆದ ಸ್ಥಳದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಉಪಸ್ಥಿತರಿದ್ದರು.
ಅಲ್ಲಿಂದ ಬಾಲಸೋರ್ ಆಸ್ಪತ್ರೆಗೆ ತೆರಳಿದ ಪ್ರಧಾನಿ ಅವರು ರೈಲು ಅಪಘಾತದಲ್ಲಿ ಬದುಕುಳಿದ ಕೆಲವರನ್ನು ಮಾತನಾಡಿಸಿ, ವೈದ್ಯರೊಂದಿಗೆ ಸಂವಾದ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು