ನವದೆಹಲಿ:ವಿಐಪಿ ಸಂಸ್ಕೃತಿಯನ್ನು ತೊಡೆದು ಹಾಕಲು ಮುಂದಾಗಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮತ್ತೊಂದು ಕ್ರಮಕ್ಕೆ ಮುಂದಾಗಿದೆ.
ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ವಿಐಪಿ ವಾಹನಗಳ ಮೇಲೆ ಇರುವ ಸೈರೆನ್ಗೆ ಕೊಕ್ ನೀಡಲು ಮುಂದಾಗಿದ್ದಾರೆ. ವಿಐಪಿ ಕಾರುಗಳ ಮೇಲಿನ ಕೆಂಪು ದೀಪಕ್ಕೆ ಮುಕ್ತಿ ಹಾಡುವ ಭಾಗ್ಯ ನನ್ನದಾಗಿತ್ತು. ಈಗ ನಾನು ವಿಐಪಿ ಕಾರುಗಳ ಮೇಲಿನ ಸೈರೆನ್ಗೂ ಮಂಗಳ ಹಾಡಲು ಯೋಜನೆ ಮಾಡುತ್ತಿದ್ದೇನೆ ಎಂದು ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಜನರು ಶಬ್ದ ಮಾಲಿನ್ಯದಿಂದ ಮುಕ್ತರಾಗಬೇಕೆಂದು ನಾನು ಬಯಸುತ್ತೇನೆ ಎಂದು ನಿತಿನ್ ಗಡ್ಕರಿ ಅವರು ಪುಣೆಯಲ್ಲಿ ಶನಿವಾರ ಚಾಂದಿನಿ ಚೌಕ್ ಮೇಲ್ಸೇತುವೆ ಉದ್ಘಾಟಿಸಿ ಹೇಳಿದರು.