Categories: ದೆಹಲಿ

ಬುಲೆಟ್‌ ರೈಲು ಯೋಜನೆ ಎಲ್ಲಿವರೆಗೆ ಬಂತು: ವಿಡಿಯೋ ನೋಡಿ

ನವದೆಹಲಿ: ದೇಶದ ಮಹಾತ್ವಕಾಂಕ್ಷೆಯ ರೈಲು ಯೋಜನೆಗಳಲ್ಲೊಂದಾದ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯಲ್ಲಿ ಪ್ರಮುಖ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬುಲೆಟ್ ಟ್ರೈನ್ ಪ್ರಾಜೆಕ್ಟ್‌ನಲ್ಲಿ ಭಾರೀ ಪ್ರಗತಿ ಸಾಧಿಸಲಾಗಿದ್ದು, 251.40 ಕಿಲೋಮೀಟರ್‌ನಲ್ಲಿ ಪಿಲ್ಲರ್‌ಗಳು, 103.24 ಕಿಮೀಗಳಲ್ಲಿ ಎಲಿವೇಟೆಡ್ ಸೂಪರ್ ಸ್ಟ್ರಕ್ಚರ್ ನಿರ್ಮಿಸಲಾಗಿದೆ ಎಂದು ಅವರು ವೀಡಿಯೊವನ್ನುಟ್ವೀಟ್ ಮಾಡಿದ್ದಾರೆ.

ಈ ರೈಲು ಕಾರಿಡಾರ್‌ನ ಉದ್ದ 508.17 ಕಿಲೋಮೀಟರ್. ಈ ರೈಲು ಸೇವೆ ಲಭ್ಯವಾದ ನಂತರ, ಅಹಮದಾಬಾದ್‌ನಿಂದ ಕೇವಲ ಎರಡೂವರೆ ಗಂಟೆಗಳಲ್ಲಿ ಮುಂಬೈ ತಲುಪಬಹುದು. ಗುಜರಾತ್ ನಲ್ಲಿ ಒಟ್ಟು 8 ನಿಲ್ದಾಣಗಳಿವೆ. ಮಹಾರಾಷ್ಟ್ರದಲ್ಲಿ ನಾಲ್ಕು ನಿಲ್ದಾಣಗಳಿವೆ.

ಬುಲೆಟ್ ರೈಲಿನ ಮೊದಲ ಪ್ರಯೋಗವನ್ನು 2026 ರಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಯೋಗಿಕ ಸಂಚಾರದ ಭಾಗವಾಗಿ ಬುಲೆಟ್ ರೈಲು ಗಂಟೆಗೆ 350 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ, ಇದು ವಿಮಾನದ ಟೇಕಾಫ್ ವೇಗಕ್ಕೆ ಸಮಾನವಾಗಿದೆ. ಆದರೆ, ಇದು ಸಾರ್ವಜನಿಕರಿಗೆ ಲಭ್ಯವಾದಾಗ, ಗಂಟೆಗೆ 320 ಕಿ.ಮೀ ವೇಗದಲ್ಲಿ ಓಡಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ashika S

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

2 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

11 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

14 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

29 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

30 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

36 mins ago