News Karnataka Kannada
Monday, April 29 2024
ದೆಹಲಿ

ಗಾಂಧಿ ಭಾವಚಿತ್ರ ಇರಿಸಲು ಅವಕಾಶ ನೀಡದಂತೆ ಮಾಡಿದ್ದು ಯಾರು: ಕೈ ಪಕ್ಷಕ್ಕೆ ಮೋದಿ ಪ್ರಶ್ನೆ

Who prevented gandhi's portrait from being kept: PM Modi to party
Photo Credit : IANS

ನವದೆಹಲಿ: ಈಶಾನ್ಯ ರಾಜ್ಯಗಳ ಪ್ರತಿಯೊಂದು ಸಮಸ್ಯೆಗಳಿಗೂ ಕಾಂಗ್ರೆಸ್ ತಾಯಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು ಈಶಾನ್ಯ ರಾಜ್ಯಗಳ ಸಮಸ್ಯೆ ಜೀವಂತವಾಗಿರಿಸಿದ್ದು ಕಾಂಗ್ರೆಸ್‌ ಎಂದರು.

ಮಣಿಪುರದಲ್ಲಿ ಬಂಡಾಯ ಸಂಘಟನೆಗಳ ಅಪೇಕ್ಷೆಯಂತೆ ಎಲ್ಲವೂ ನಡೆಯುತ್ತಿದ್ದಾಗ ಮಣಿಪುರದಲ್ಲಿ ಯಾರ ಸರ್ಕಾರವಿತ್ತು? ಸರ್ಕಾರಿ ಕಚೇರಿಗಳಲ್ಲಿ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಅವಕಾಶ ನೀಡದಿದ್ದಾಗ ಮಣಿಪುರದಲ್ಲಿ ಯಾರ ಸರ್ಕಾರ ಇತ್ತು ಎಂದು ಪ್ರಶ್ನಿಸಿದರು.

ಈಶಾನ್ಯದವರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಎಂದಿಗೂ ಪ್ರಯತ್ನಿಸಲಿಲ್ಲ. ನಾನು (ಈಶಾನ್ಯ) ರಾಜ್ಯಗಳಿಗೆ 50 ಬಾರಿ ಭೇಟಿ ನೀಡಿದ್ದೇನೆ. ಇದು ಕೇವಲ ದತ್ತಾಂಶವಲ್ಲ, ಇದು ಈಶಾನ್ಯದ ಕಡೆಗೆ ಸಮರ್ಪಣೆಯಾಗಿದೆ. 1956 ರ ಮಾರ್ಚ್ 5 ರಂದು, ಕಾಂಗ್ರೆಸ್ ಮಿಜೋರಾಂನ ಮುಗ್ಧ ಜನರ ಮೇಲೆ ವಾಯುಪಡೆಯ ಮೂಲಕ ದಾಳಿ ನಡೆಸಿತು. ಆ ನೋವನ್ನು ರಾಜ್ಯವು ಇನ್ನೂ ಮರೆಯಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು