Categories: ದೆಹಲಿ

ಹಾಡು ಹಗಲೇ ನಡುರಸ್ತೆಯಲ್ಲಿ ಯುವತಿಯನ್ನು ಚಾಕುವನಿಂದ ಇರಿದ ಯುವಕ

ದೆಹಲಿ: ಯುವಕನೋರ್ವ ಹಾಡು ಹಗಲೇ ಯುವತಿಗೆ 8 ಬಾರಿ ಚಾಕು ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. 22 ವರ್ಷದ ಅಮನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಈತ ಸನಾ ಎಂಬಾಕೆಗೆ ಚಾಕುವಿನಿಂದ ಇರಿದಿದ್ದಾನೆ.

ಸನಾಳನ್ನು ಅಟ್ಟಾಡಿಸಿಕೊಂಡು ಚಾಕುವಿನಿಂದ ದಾಳಿ ಮಾಡಿದ್ದಾನೆ. ಆತ ಚಾಕುವಿನಿಂದ ಚುಚ್ಚುತ್ತಿದ್ದಂತೆಯೇ ದಾರಿಹೋಕರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಆತ ಅವರ ಮೇಲೂ ದಾಳಿ ಮಾಡಲು ಮುಂದಾಗಿದ್ದು, ಬಳಿಕ ತಪ್ಪಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಖರ್ಜಿ ನಗರದ ವಿದ್ಯಾರ್ಥಿಗಳು ಅಮಾನ್​ನನ್ನು ಗೇಲಿ ಮಾಡಿದ್ದರು. ಆ ಪ್ರದೇಶದಲ್ಲಿ ಓಡಾಡುತ್ತಿದ್ದವರೆಲ್ಲಾ ಆತನನ್ನು ಹುಚ್ಚ ಎಂದು ಕರೆಯುತ್ತಿದ್ದರು. ಸನಾ ಸರ್ಕಾರಿ ಪರೀಕ್ಷೆಗೆ ತಯಾರಿ ನಡೆಸಲು ಗ್ರಂಥಾಲಯಕ್ಕೆ ಹೋಗುತ್ತಿದ್ದಳು ಈ ವೇಳೆ ಸನಾ ಕೂಡ ಆತನನ್ನು ಗೇಲಿ ಮಾಡಿದ್ದಾಳೆ ಇದರಿಂದ ಕೋಪಗೊಂಡ ಆತ ಅಲ್ಲೇ ತರಕಾರಿ ಅಂಗಡಿಯಲ್ಲಿದ್ದ ಚಾಕು ತೆಗೆದುಕೊಂಡು ಆಕೆಗೆ ಚುಚ್ಚಿದ್ದಾನೆ. ಸುಮಾರು 8 ಬಾರಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ.

ಇನ್ನು ಘಟನೆಯಲ್ಲಿ ಯುವತಿಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸದ್ಯ ಯುವಕ ಚಾಕು ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Nisarga K

Recent Posts

ವಿಮಾನ ನಿಲ್ದಾಣದಲ್ಲಿ 13.56 ಕೋಟಿ ಮೌಲ್ಯದ ಚಿನ್ನ ಜಪ್ತಿ : 11 ಪ್ರಯಾಣಿಕರ ಬಂಧನ

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 13.56 ಕೋಟಿ ರೂ. ಮೌಲ್ಯದ 22.14 ಕೆಜಿ ಚಿನ್ನವನ್ನು…

4 mins ago

ಬೈಕ್ ಗೆ ಬಸ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯ ಬರುವ ಅಣ್ಣಿಗೇರಿ ಸಮೀಪ ಕೊಂಡಿಕೊಪ್ಪ ಕ್ರಾಸ್‌ ಬಳಿ ಬಸ್‌ ಚಾಲಕ ರಾಂಗ್…

16 mins ago

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ಗಚ್ಚಿನಗಕಟ್ಟಿ ಕಾಲೋನಿಯಿಂದ ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

22 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕತ್ತೆ ಕಿರುಬ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕತ್ತೆ ಕಿರುಬ ( ಹೈನಾ ) ಶ್ವಾನ ಕಾಣಿಸಿಕೊಂಡಿದೆ.

32 mins ago

ಲೋಕಸಭಾ ಚುನಾವಣೆ : ಮತದಾರನಿಗೆ ಕಾಂಗ್ರೆಸ್​ ಶಾಸಕನಿಂದ ಕಪಾಳಮೋಕ್ಷ

ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ವೈಎಸ್​ಆರ್​ ಕಾಂಗ್ರೆಸ್​ನ ಶಾಸಕ ಎ ಶಿವಕುಮಾರ್ಮ ಮತಗಟ್ಟೆಯಲ್ಲಿ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ…

39 mins ago

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

52 mins ago