ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. 1947ರ ಆಗಸ್ಟ್ 15ರ ಮಧ್ಯರಾತ್ರಿ 12 ಗಂಟೆಗೆ ಬ್ರಿಟಿಷರಿಂದ ಭಾರತವನ್ನು ಮುಕ್ತಿಗೊಳಿಸಿ, ಸ್ವಾತಂತ್ರ್ಯವನ್ನು ಪಡೆಯಲಾಯಿತು. ಈ ಸ್ವಾತ್ರ್ಯವನ್ನು ಪಡೆಯಲು ಅನೇಕ ವೀರ ಹೋರಾಟಗಾರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಅದಕ್ಕಾಗಿಯೇ ಅವರ ತ್ಯಾಗ, ಬಲಿದಾನವನ್ನು ನೆನಪು ಮಾಡಿಕೊಳ್ಳುವ ಸಲುವಾಗಿ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ.
ಆಗಸ್ಟ್ 15 ರ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ, ಧ್ವಜವನ್ನು ಹಗ್ಗದಿಂದ ಕೆಳಗಿನಿಂದ ಮೇಲಕ್ಕೆ ಎಳೆಯಲಾಗುತ್ತದೆ, ನಂತರ ಅದನ್ನು ಬಿಚ್ಚಲಾಗುತ್ತದೆ ಮತ್ತು ಹಾರಿಸಲಾಗುತ್ತದೆ ಇದನ್ನು ಧ್ವಜಾರೋಹಣ ಎಂದು ಕರೆಯಲಾಗುತ್ತದೆ. ಏಕೆಂದರೆ ಇದನ್ನು 15 ಆಗಸ್ಟ್ 1947 ರ ಐತಿಹಾಸಿಕ ಘಟನೆಯನ್ನು ಗೌರವಿಸಲು ಇದನ್ನು ಮಾಡಲಾಗುತ್ತದೆ. ಸಂವಿಧಾನದಲ್ಲಿ ಇದನ್ನು ಧ್ವಜಾರೋಹಣದ ಎಂದು ಕರೆಯಲಾಗುತ್ತದೆ. ಇಂಗ್ಲಿಷಿನಲ್ಲಿ ಫ್ಲಾಗ್ ಹೋಸ್ಟಿಂಗ್ ಎನ್ನುತ್ತಾರೆ.
ಪ್ರಮುಖವಾಗಿ ‘ಆಗಸ್ಟ್ 15ರಂದು ದೇಶದ ಪ್ರಧಾನಮಂತ್ರಿ ಧ್ವಜಾರೋಹಣ ಮಾಡುತ್ತಾರೆ. ಏಕೆಂದರೆ ಸ್ವಾತಂತ್ರ್ಯ ಸಿಕ್ಕ ದಿನದಂದು ಭಾರತದ ಸಂವಿಧಾನವು ಜಾರಿಗೆ ಬಂದಿರಲಿಲ್ಲ. ಹೀಗಾಗಿ ರಾಷ್ಟ್ರದ ಸಾಂವಿಧಾನಿಕ ಮುಖ್ಯಸ್ಥರಾದ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಮಾಡಿರುವುದಿಲ್ಲ. ಈ ದಿನದ ಸಂಜೆ, ರಾಷ್ಟ್ರಪತಿಗಳು ತಮ್ಮ ಸಂದೇಶವನ್ನು ರಾಷ್ಟ್ರಕ್ಕೆ ನೀಡುತ್ತಾರೆ. ಆದರೆ ದೇಶದಲ್ಲಿ ಸಂವಿಧಾನದ ಅನುಷ್ಠಾನದ ಸ್ಮರಣಾರ್ಥವಾಗಿ ಆಚರಿಸಲಾಗುವ ಜನವರಿ 26 ಗಣರಾಜೋತ್ಸವದದು ರಾಷ್ಟ್ರಪತಿಗಳು ಧ್ವಜಾರೋಹಣ ಮಾಡುತ್ತಾರೆ’. ಹೀಗಾಗಿ ಪ್ರಧಾನ ಮಂತ್ರಿಯವರು ಧ್ವಜಾರೋಹಣ ಮಾಡುತ್ತಾರೆ.