News Karnataka Kannada
Sunday, May 12 2024
ದೇಶ

ಜಗನ್ನಾಥನ ದರ್ಶನಕ್ಕೆ ಇಂದಿನಿಂದಲೇ ವಸ್ತ್ರಸಂಹಿತೆ ಜಾರಿ

Jaganath
Photo Credit : News Kannada

ಭುವನೇಶ್ವರ: ಪುರಿ ಜಗನ್ನಾಥ ದೇಗುಲಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಇಂದಿನಿಂದ (ಜ.01) ವಸ್ತ್ರಸಂಹಿತೆ ‌ಕಡ್ಡಾಯಗೊಳಿಸಲಾಗಿದೆ. ಜತೆಗೆ ದೇಗುಲದ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಜಗಿಯುವುದನ್ನು, ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ನಿಯಮ 2024ರ ಹೊಸ ವರ್ಷದ ಮೊದಲ ದಿನದಿಂದಲೇ ಜಾರಿಗೆ ಬಂದಿದೆ. ದೇಗುಲಕ್ಕೆ ಬರುವ ಭಕ್ತರು ಸಭ್ಯ ಉಡುಪುಗಳನ್ನು ಧರಿಸಬೇಕು ಎಂದು ಶ್ರೀ ಜಗನ್ನಾಥ ದೇವಾಲಯದ ಆಡಳಿತ ಮಂಡಳಿ (SJTA) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಾಫ್ ಪ್ಯಾಂಟ್, ಶಾರ್ಟ್ಸ್, ಟೋರ್ನ್ ಜೀನ್ಸ್, ಸ್ಕರ್ಟ್, ಸ್ಲೀವ್ ಲೆಸ್ ಡ್ರೆಸ್ ಧರಿಸಿದ ಭಕ್ತರಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ ಎಂದು ಅವರು ತಿಳಿಸಿದ್ದಾರೆ.

ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಆವರಣದೊಳಗೆ ಗುಟ್ಕಾ ಮತ್ತು ಪಾನ್ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು