News Karnataka Kannada
Thursday, May 09 2024
ದೇಶ

ಬಕ್ರೀದ್​​ ಹಬ್ಬಕ್ಕೆ ಶುಭಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

Pm and president
Photo Credit : Twitter

ದೆಹಲಿ: ಇಂದು ಭಾರತದಲ್ಲಿ ಈದ್ ಉಲ್ ಅಧಾ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

‘ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ದೇಶದ ಪ್ರಧಾನಿ ಮೋದಿ ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ರಾಷ್ಟ್ರಪತಿ, ‘ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು