News Karnataka Kannada
Thursday, May 09 2024
ದೇಶ

ರಾಮ ಮಂದಿರದ ‘ಆಮಂತ್ರಣ ಪತ್ರಿಕೆ’ಯ ಫಸ್ಟ್ ಲುಕ್ ವೈರಲ್; ಹೇಗಿದೆ ನೋಡಿ

Invt
Photo Credit : News Kannada

ಯೋಧ್ಯೆ : ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಮೂಲಕ ನನಸಾಗಲಿದ್ದು ಭಾವನಾತ್ಮಕ, ಐತಿಹಾಸಿಕ ಕ್ಷಣವನ್ನು ಮನೆ ಮನೆಗಳಲ್ಲಿ ಆಚರಿಸಲು ಜನವರಿ 22 ರಂದು ಎಲ್ಲರೂ ಸಿದ್ದರಾಗುತ್ತಿದ್ದಾರೆ.

ಇನ್ನು ಜ.22 ರಂದು ಅತ್ಯಂತ ಉತ್ಸಾಹದಿಂದ ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ಟ್ರಸ್ಟ್ ಆಮಂತ್ರಣ ಪತ್ರಗಳನ್ನು ಕಳುಹಿಸಲು ಪ್ರಾರಂಭಿಸಿದೆ. ಜನವರಿ 16 ರಿಂದ ಒಂದು ವಾರದ ಆಚರಣೆ ಪ್ರಾರಂಭವಾಗಲಿದ್ದು, ಅದಕ್ಕಾಗಿ ಜನರಿಗೆ ಆಹ್ವಾನಗಳನ್ನು ಕಳುಹಿಸಲಾಗುತ್ತಿದೆ.

ಆದರೆ, ಈ ಒಂದು ವಾರದಲ್ಲಿ ಯಾತ್ರಾ ನಗರದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು, ಆಹ್ವಾನವಿಲ್ಲದವರು ನಗರಕ್ಕೆ ಪ್ರಯಾಣಿಸುವುದನ್ನ ತಪ್ಪಿಸುವಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಇತ್ತ ಡಿವೈನ್‌ ಇಂಡಿಯಾ ತನ್ನ ಎಕ್ಸ್‌ ಖಾತೆಯಲ್ಲಿ ಸುಂದರವಾದ ಅಯೋಧ್ಯೆ ರಾಮ ಮಂದಿರದ ‘ಆಮಂತ್ರಣ ಪತ್ರಿಕೆಯ ಮೊದಲ ನೋಟವನ್ನು ಹಂಚಿಕೊಂಡಿದೆ. ಇದು ಜಾಲತಾಣದಲ್ಲಿ ಸಕತ್‌ ವೈರಲ್‌ ಆಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು