ದೆಹಲಿ: ಉತ್ತರಪ್ರದೇಶದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ನಿಧನ ಹೊಂದಿದ್ದಾರೆ. ಜೈಲಿನಲ್ಲಿದ್ದ ಡಾನ್ ಮುಖ್ತಾರ್ ಅನ್ಸಾರಿಗೆ ಹೃದಯಾಘಾತವಾಗಿತ್ತು. ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
8 ಪ್ರಕರಣಗಳಲ್ಲಿ ಮುಖ್ತಾರ್ ಅನ್ಸಾರಿ ಶಿಕ್ಷೆ ಅನುಭವಿಸುತ್ತಿದ್ದರು. ಮುಖ್ತಾರ್ ಅವರ ನಿಧನದ ಬಳಿಕ ಘಾಜಿಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಇತರೆ ಸೂಕ್ಷ್ಮ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಆದೇಶಿಸಲಾಗಿದೆ.
ಇತ್ತೀಚೆಗೆ ಜೈಲಿನಲ್ಲಿ ತನ್ನನ್ನು ಕೊಲೆ ಮಾಡಲು ಯತ್ನಿಸಲಾಗುತ್ತಿದೆ ಎಂದು ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಅನ್ಸಾರಿ ಆರೋಪಿಸಿದ್ದರು. ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡಲಾಗುತ್ತಿದ್ದು, ಇದರಿಂದ ಆರೋಗ್ಯ ಹದಗೆಡುತ್ತಿದೆ ಎಂದು ಹೇಳಿದ್ದರು. ಸಂಸದ ಎಂಎಲ್ಎ ಕೋರ್ಟ್ ಕೂಡ ಈ ವಿಚಾರದಲ್ಲಿ ಜೈಲು ಆಡಳಿತದಿಂದ ವರದಿ ಕೇಳಿತ್ತು.