ಗಾಂಧಿನಗರ್: ಹತ್ತನೇ ಆವೃತ್ತಿಯ ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮಿಟ್ 2024 ಕಾರ್ಯಕ್ರಮ ಇಲ್ಲಿಯ ಮಹಾತ್ಮ ಮಂದಿರ್ನಲ್ಲಿ ಚಾಲನೆಗೊಂಡಿದೆ. ‘ಭವಿಷ್ಯಕ್ಕೆ ದಾರಿ’ ಎಂಬುದು ಈ ಬಾರಿಯ ಸಮಿಟ್ನ ಥೀಮ್ ಆಗಿದೆ. ಇಲ್ಲಿ 2 ಲಕ್ಷ ಕೋಟಿ ರೂ ಹೂಡಿಕೆ ಮಾಡುವುದಾಗಿ ಅದಾನಿ ಘೋಷಣೆ ಮಾಡಿದ್ದಾರೆ.
ಪ್ರಧಾನಿ ಮೋದಿ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಉದ್ಘಾಟನೆ ನೆರವೇರಿಸಲಿದ್ದಾರೆ. ಹಲವು ವಿಶ್ವನಾಯಕರು, 34 ಪಾರ್ಟ್ನರ್ ದೇಶಗಳು ಹಾಗೂ 16 ಪಾರ್ಟ್ನರ್ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ವೈಬ್ರಂಟ್ ಗುಜರಾತ್ ಸಮಿಟ್ನಲ್ಲಿ ಭಾಷಣ ಮಾಡಿದ ಉದ್ಯಮಿ ಗೌತಮ್ ಅದಾನಿ ತಮ್ಮ ಮಾತೃ ನಾಡಾದ ಗುಜರಾತ್ನಲ್ಲಿ ಮುಂದಿನ ಐದು ವರ್ಷದಲ್ಲಿ 2 ಲಕ್ಷ ಕೋಟಿ ರೂಗೂ ಹೆಚ್ಚು ಮೊತ್ತದ ಹೂಡಿಕೆ ಮಾಡುವುದಾಗಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
‘ಸ್ವಾವಲಂಬನೆ ಭಾರತಕ್ಕೆ ಹಸಿರು ಸರಬರಾಜು ಸರಪಳಿ ಬಲಪಡಿಸುತ್ತಿದ್ದೇವೆ. ಹಾಗೆಯೇ, ಅತಿದೊಡ್ಡ ಸಮಗ್ರ ಮರುಬಳಕೆ ಇಂಧನ ವ್ಯವಸ್ಥೆ ರೂಪಿಸಲಿದ್ದೇವೆ’ ಎಂದು ಅದಾನಿ ಘೋಷಿಸಿದ್ದಾರೆ.
ಗೌತಮ್ ಅದಾನಿ ಇತ್ತಿಚೆಗೆಯಷ್ಟೇ ತಮಿಳುನಾಡಿನಲ್ಲಿ ಸಾವಿರಾರು ಕೋಟಿ ರೂ ಹೂಡಿಕೆ ಮಾಡುವುದಾಗಿ ಹೇಳಿದ್ದರು. ವರ್ಷದ ಹಿಂದೆ ಹಿಂಡನ್ಬರ್ಗ್ ವರದಿ ಬಳಿಕ ಸಾಕಷ್ಟು ಹಿನ್ನಡೆ ಕಂಡಿದ್ದ ಗೌತಮ್ ಅದಾನಿ ಇದೀಗ ತಿರುಗಿ ನಿಂತಿದ್ದಾರೆ. ವಿಶ್ವದ ಅಗ್ರ ಶ್ರೀಮಂತರ ಸಾಲಿನಲ್ಲಿ ಅವರು ನಿಂತಿದ್ದಾರೆ.
ಇನ್ನು ಮುಂಬೈನಲ್ಲಿ ಕೇಂದ್ರವಾಗಿಟ್ಟುಕೊಂಡು ಉದ್ಯಮ ಸಾಮ್ರಾಜ್ಯ ಸ್ಥಾಪಿಸಿರುವ ಮುಕೇಶ್ ಅಂಬಾನಿ ಅವರು ತಮ್ಮ ರಿಲಾಯನ್ಸ್ ಕಂಪನಿ ಯಾವತ್ತಿದ್ದರೂ ಗುಜರಾತೀ ಕಂಪನಿಯೇ ಆಗಿ ಉಳಿದಿರುತ್ತದೆ ಎಂದು ಹೇಳಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…