News Karnataka Kannada
Monday, April 29 2024
ದೇಶ

ಟ್ವಿಟರ್‌ನಲ್ಲೇ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಗೆಹಲೋತ್

Ashok Gehlot and pm modi
Photo Credit : Twitter

ಜೈಪುರ: ಸೀಕರ್‌ನಲ್ಲಿ ಆಯೋಜನೆಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಷಣವನ್ನು ಪ್ರಧಾನಿ ಕಾರ್ಯಾಲಯ ರದ್ದುಪಡಿಸಿರುವುದಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ. ‘ಈ ಕಾರ್ಯಕ್ರಮದಲ್ಲಿ ಗೆಹಲೋತ್‌ ಪಾಲ್ಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಅವರು ಬಂದರೆ ಸ್ವಾಗತ’ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಗೆಹಲೋತ್, ‘ನಾನು ನನ್ನ ಮಾತಿನ ಮೂಲಕ ಪ್ರಧಾನಿಯನ್ನು ಸ್ವಾಗತಿಸಲು ಸಾಧ್ಯವಾಗದ ಕಾರಣ. ಟ್ವೀಟ್ ಮೂಲಕವೇ ಮೋದಿಯನ್ನು ಸ್ವಾಗತಿಸುತ್ತಿದ್ದೇನೆ’ ಎಂದಿದ್ದಾರೆ.

ಗೆಹಲೋತ್ ಟ್ವಿಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಕಾರ್ಯಾಲಯ, ‘ರಾಜ್ಯದಲ್ಲಿನ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ನಿಮಗೆ ಸದಾ ಸ್ವಾಗತವಿದೆ. ಸೀಕರ್‌ನಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಅದು ಅತ್ಯಂತ ಮೌಲ್ಯಯುತ’ ಎಂದು ಹೇಳಿದೆ.

‘ಕಾರ್ಯಕ್ರಮದಲ್ಲಿ ನೀವು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಹಿತಿ ಬಂದಿದ್ದರಿಂದ, ನಿಗದಿಯಾಗಿದ್ದ ನಿಮ್ಮ ಭಾಷಣವನ್ನು ರದ್ದುಪಡಿಸಬೇಕಾಯಿತು. ಮೋದಿ ಅವರ ಈ ಹಿಂದಿನ ಕಾರ್ಯಕ್ರಮಗಳಲ್ಲೂ ನಿಮ್ಮನ್ನು ಆಹ್ವಾನಿಸಲಾಗಿತ್ತು. ನೀವೂ ಬಂದಿದ್ದಿರಿ. ಆದಾಗ್ಯೂ ನಿಮ್ಮ ಹೆಸರು ವೇದಿಕೆಯ ಫಲಕದಲ್ಲಿ ಹಾಗೂ ಅಭಿವೃದ್ಧಿ ಕಾರ್ಯಗಳ ಫಲಕಗಳಲ್ಲೂ ಇದೆ. ಇತ್ತೀಚಿನ ಅಪಘಾತದಲ್ಲಿ ಗಾಯಗೊಂಡಿರುವ ನೀವು ವೈಕ್ತಿಕವಾಗಿ ಪಾಲ್ಗೊಳ್ಳಲು ಸಾದ್ಯವಾಗದಿದ್ದರೂ, ನಿಮ್ಮ ಆಗಮನ ಅತ್ಯಂತ ಮೌಲ್ಯಯುತ’ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು