Categories: ಗೋವಾ

ಗೋವಾದಲ್ಲಿ ಶೇಕಡಾ 30ರಷ್ಟು ಮಹಿಳೆಯರಿಗೆ ಉದ್ಯೋಗ ಮೀಸಲು ಭರವಸೆ: ಪ್ರಿಯಾಂಕಾ ಗಾಂಧಿ

ಪಣಜಿ (ಪಿಟಿಐ) : ಗೋವಾದಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗಾಗಿ ₹500 ಕೋಟಿ ಒದಗಿಸಲಾಗುವುದು ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇಕಡಾ 30ರಷ್ಟನ್ನು ಮಹಿಳೆಯರಿಗೆ ಮೀಸಲು ಇರಿಸಲಾಗುವುದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ಕೊಟ್ಟಿದ್ದಾರೆ. ಗೋವಾದ ನ್ಯುವೆಮ್‌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಿಯಾಂಕಾ ಅವರು ಮಾತನಾಡಿದರು.

ಸರ್ಕಾರಿ ಉದ್ಯೋಗದ ನೇಮಕಾತಿಯ ಹಗರಣಗಳನ್ನು ತಡೆಯಲು ಸಿಬ್ಬಂದಿ ಆಯ್ಕೆ ಆಯೋಗವನ್ನು ರಚಿಸಲಾಗುವುದು. ದುರ್ಬಲ ವರ್ಗಗಳ ಕುಟುಂಬಗಳಿಗೆ ತಿಂಗಳಿಗೆ ₹6,000 ನೀಡುವ ನ್ಯಾಯ ಯೋಜನೆಯನ್ನೂ ಜಾರಿ ಮಾಡಲಾಗುವುದು. ಇದು ಕುಟುಂಬಗಳಿಗೆ ನೆರವಾಗು ವುದಲ್ಲದೆ, ಅರ್ಥ ವ್ಯವಸ್ಥೆಗೆ ಹಣ ಹರಿದು ಬರುವಂತೆಯೂ ಮಾಡಲಿದೆ ಎಂದು ಪ್ರಿಯಾಂಕಾ ವಿವರಿಸಿ ದ್ದಾರೆ.

ಕೆಲಸ ಮಾಡುವ ಮಹಿಳೆಯರಿಗಾಗಿ ಮಾರ್ಗೋವಾ ಮತ್ತು ಪಣಜಿಯಲ್ಲಿ ಹಾಸ್ಟೆಲ್‌ ನಿರ್ಮಿಸಲಾಗುವುದು. ಮಹಿಳಾ ಉಸ್ತುವಾರಿಯ ಪೊಲೀಸ್‌ ಠಾಣೆಗಳ ಸಂಖ್ಯೆ ಹೆಚ್ಚಿಸಲಾಗುವುದು. ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಲೀಟರ್‌ಗೆ ₹80ರಿಂದ ಹೆಚ್ಚಳ ಆಗದಂತೆ ನೋಡಿಕೊಳ್ಳಲಾಗುವುದು. ಉಳಿದ ಮೊತ್ತವನ್ನು ಸಹಾಯಧನದ ಮೂಲಕ ಭರಿಸಲಾಗುವುದುಎಂದು ಕಾಂಗ್ರೆಸ್‌ ಪಕ್ಷವು ಭರವಸೆ ನೀಡಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶೇ 40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡುವ ನಿರ್ಧಾರವನ್ನು ಪ್ರಿಯಾಂಕಾ ಪುನರುಚ್ಚರಿಸಿದರು. ‘ಮಹಿಳೆಯರನ್ನು ರಾಜಕೀಯಕ್ಕೆ ತರಲು ನಾನು ಭಾರಿ ಪ್ರಯತ್ನ ನಡೆಸುತ್ತಿರುವುದು ನಿಮಗೆ ತಿಳಿದಿದೆ. ಇದಕ್ಕೆ ಎರಡು-ಮೂರು ಕಾರಣಗಳಿವೆ. ಮೊದಲನೆಯದಾಗಿ, ಜನಸಂಖ್ಯೆಯ ಶೇ 50ರಷ್ಟು ಮಹಿಳೆಯರು ಇದ್ದಾರೆ. ಹಾಗಾಗಿ, ಶೇ 50ರಷ್ಟು ಪ್ರಾತಿನಿಧ್ಯ ಹೊಂದುವುದು ಮಹಿಳೆಯರ ಹಕ್ಕು’ ಎಂದು ಪ್ರಿಯಾಂಕಾ ಪ್ರತಿಪಾದಿಸಿದರು.

‘ಈಗಿನ ರಾಜಕಾರಣವು ದ್ವೇಷ, ಸಿಟ್ಟಿನಿಂದ ತುಂಬಿ ಹೋಗಿದೆ. ಶೇಕಡಾ 90ರಷ್ಟು ಭಾಷಣಗಳು ನಕಾರಾತ್ಮಕ ವಾಗಿವೆ. ಸಕಾರಾತ್ಮಕ ಅಂಶಗಳೇ ಇಲ್ಲ. ಮಹಿಳೆಯರು ವಾಸ್ತವದ ನೆಲೆಗಟ್ಟಿನಲ್ಲಿ ಯೋಚಿಸುವುದರಿಂದ ರಾಜಕಾರಣಕ್ಕೆ ಸಕಾರಾತ್ಮಕತೆ ಮತ್ತು ಮಮತೆಯನ್ನು ತುಂಬುವುದು ಸಾಧ್ಯ ಎಂಬುದು ನನ್ನ ದೃಢವಾದ ನಂಬಿಕೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

Gayathri SG

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

5 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

21 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

46 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago