ಪಣಜಿ (ಡಿ. 22) : ಬಾ ನಲ್ಲೆ ಮಧುಚಂದ್ರಕೆ ಕನ್ನಡ ಸಿನಿಮಾದ ಕತೆಯೇ ಇಲ್ಲಿ ಪುನರಾವರ್ತನೆಯಾಗಿದೆ. ಪತ್ನಿಯನ್ನು ನಂಬಿಸಿ ಪ್ರವಾಸಕ್ಕೆ ಕರೆದುಕೊಂಡು ಬಂದು ಕೊಲೆ ಮಾಡಿದ್ದವ ಸಿಕ್ಕಿಬಿದ್ದಿದ್ದಾನೆ.
ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ 29 ವರ್ಷದ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗೋವಾ ಪಣಜಿ ಮಾರ್ಗೋವ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಾಗರ್ ತಿಂಬಾಡಿಯಾ ಎಂದು ಗುರುತಿಸಲಾಗಿದ್ದು, ಗೋವಾದ (Goa) ರಾವನ್ಫೊಂಡ್ ಪ್ರದೇಶದಲ್ಲಿ ನೆಲೆಸಿದ್ದ.
ಗುಜರಾತ್ ಮೂಲದ ಸಾಗರ್ ವೃತ್ತಿಯಲ್ಲಿ ಸೆರಾಮಿಕ್ ಟೈಲ್ಸ್ ಡೀಲರ್. ಈತನ ಪತ್ನಿ ಸಾವನ್ನಪ್ಪಿದ ನಂತರ, ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ಸಂದರ್ಭ ಮೃತ ಮಹಿಳೆಯ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದವು. ಮದುವೆಯಾಗಿ ಸರಿಯಾಗಿ ಎರಡು ವರ್ಷದ ನಂತರ ಆಕೆ ಸಾವನ್ನಪ್ಪಿದ್ದಳು.
ಅನುಮಾನಗೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಒಂದೊಂದೆ ಅಂಶಗಳು ಬಹಿರಂಗವಾಗಿವೆ. ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಆಕೆಯನ್ನು ಗಂಡನೇ ಕೊಲೆ ಮಾಡಿದ್ದು ಗೊತ್ತಾಗಿದೆ. ಸಾಗರ್ ತಿಂಬಾಡಿಯ ವಿರುದ್ಧ ಎಸ್ಡಿಎಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಡಿ ಆತನ ಮೇಲೆ ಕೊಲೆ ಆರೋಪ ದಾಖಲಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿಲಾಗಿದೆ.