News Karnataka Kannada
Monday, April 29 2024
ಗೋವಾ

‘ಮತಗಳನ್ನು ಪಡೆಯಲು ಪ್ರಧಾನಿ ಮೋದಿ ಏನು ಬೇಕಾದರೂ ಮಾಡುತ್ತಾರೆ : ಮೋದಿಗೆ ಮಮತಾ ಟಾಂಗ್

Photo Credit :

ಪಣಜಿ: ಪವಿತ್ರ ಗಂಗಾ ನದಿಯನ್ನು ಚುನಾವಣೆ ವೇಳೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ನೆನಪಿಸಿಕೊಳ್ಳುತ್ತಾರೆ.  ‘ಮತಗಳನ್ನು ಪಡೆಯಲು ಪ್ರಧಾನಿ ಮೋದಿ ಏನು ಬೇಕಾದರೂ ಮಾಡುತ್ತಾರೆ. ಉತ್ತರಾಖಂಡದಲ್ಲಿ ತಪ್ಪಸ್ಸು (ಧ್ಯಾನ) ಮಾಡಿದ್ದರು. ಈಗ ಗಂಗಾನದಿಯಲ್ಲಿ ಸ್ನಾನ ಮಾಡಿದ್ದಾರೆ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಏನೂ ಬೇಕಾದರೂ ಮಾಡಲಿ, ಅವರಿಗೆ ಸ್ವಾತಂತ್ರ್ಯವಿದೆ. ಆದರೆ ವರ್ಷಪೂರ್ತಿ ನೀವು ಎಲ್ಲಿದ್ದಿರಿ’ ಎಂದು ಪ್ರಶ್ನಿಸಿದರು. ಅವರು ವೋಟಿಗಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಎರಡು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೋವಿಡ್-19 ಮೃತದೇಹಗಳನ್ನು ಗಂಗಾ ನದಿಗೆ ಎಸೆಯುವ ಮೂಲಕ ಅಪವಿತ್ರಗೊಳಿಸಿದೆ ಎಂದು ಯೋಗಿ ಆದಿತ್ಮನಾಥ್ ಸರ್ಕಾರದ ವಿರುದ್ಧವೂ ಟೀಕೆ ಮಾಡಿದರು. ‘ನಾವು ಗಂಗಾಜಲವನ್ನು ಪವಿತ್ರ ಎಂದು ನಂಬುತ್ತೇವೆ. ತಾಯಿ ಎಂದು ಕರೆಯುತ್ತೇವೆ. ಆದರೆ ಬಿಜೆಪಿಯವರು ಕೋವಿಡ್‌ನಿಂದ ಸಾವಿಗೀಡಾದವರ ಮೃತದೇಹಗಳನ್ನು ಗಂಗಾ ನದಿಗೆ ಎಸೆದಿದ್ದಾರೆ’ ಎಂದು ಆರೋಪಿಸಿದರು.

 

‘ಕುಂಭ ಮೇಳದಂತೆ ಪಶ್ಚಿಮ ಬಂಗಾಳದ ಗಂಗಾಸಾಗರಕ್ಕೆ ಸುಮಾರು 23 ಲಕ್ಷ ಜನರು ಭೇಟಿ ನೀಡುತ್ತಾರೆ. ಆದರೆ ಚುನಾವಣೆ ಸಂದರ್ಭದಲ್ಲಿ ಮಾತ್ರ ನಾವು ಗಂಗಾನದಿ ಪೂಜೆ ಮಾಡುವುದಿಲ್ಲ. ಆದರೆ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ಹೋಗಿರುವ ಮೋದಿ, ಕೇವಲ ಮತ ಪಡೆಯಲು ಮಾತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ’ ಎಂದು ಆರೋಪಿಸಿದರು. ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ್ದ ಪ್ರಧಾನಿ ಮೋದಿ, ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು