Categories: ಗೋವಾ

ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಕ್ರಮ ಬೇಡ; ಸಿ.ಟಿ. ರವಿ

ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ರಾಜ್ಯದಲ್ಲಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ ವೀಕೆಂಡ್, ಕರ್ಫ್ಯೂ ಹಾಗೂ ಲಾಕ್ ಡೌನ್ ಬಗ್ಗೆ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಪಣಜಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಕೋವಿಡ್ ಮೂರನೇ ಅಲೆ ವ್ಯಾಪಕವಾಗಿ ಹರಡಬಹುದು ಆದರೆ ಇದರಿಂದ ಪ್ರಾಣಾಪಾಯ ಕಡಿಮೆ. ಕೋವಿಡ್ ನಿಯಂತ್ರಣಕ್ಕೆ ಕೆಲ ಕಠಿಣ ನಿಯಮ ಜಾರಿಗೆ ತರಲಿ ಆದರೆ ಲಾಕ್ ಡೌನ್ ಮಾಡಿ ಮತ್ತಷ್ಟು ಸಂಕಷ್ಟ ಕೊಡುವುದು ಯಾಕೆ ? ಎಂದು ಪ್ರಶ್ನಿಸಿದ್ದಾರೆ.

ಕರ್ಫ್ಯೂ, ಲಾಕ್ ಡೌನ್ ಕ್ರಮ ಬೇಡ. ಕೋವಿಡ್ ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಲಾಕ್ ಡೌನ್ ನಿಂದಾಗಿ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದಾರೆ. ಆರ್ಥಿಕವಾಗಿ ಕುಗ್ಗಿದ್ದಾರೆ. ಹೀಗಿರುವಾಗ ಮೂರನೇ ಅಲೆಯಲ್ಲಿಯೂ ಮತ್ತೆ ಲಾಕ್ ಡೌನ್, ವೀಕೆಂಡ್ ಕರ್ಫ್ಯೂ ಹೇರುವುದರಿಂದ ಜನರನ್ನು ಮತ್ತೆ ಸಂಕಷ್ಟಕ್ಕೆ ದೂಡಿದಂತಾಗುತ್ತದೆ. ಜೀವದ ಜತೆಗೆ ಜೀವನ ನಡೆಸುವುದೂ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಬೇಡ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.

Gayathri SG

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

17 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

40 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

58 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago