ಗೋವಾ

ಗೋವಾದಲ್ಲಿ 17 ಲಕ್ಷ ಮೌಲ್ಯದ ಡ್ರಗ್ಸ್ ವಶ

ಪಣಜಿ, ಜ.18: ಗೋವಾ ಪೊಲೀಸರು ಮಾದಕ ದ್ರವ್ಯ ಮಾರಾಟದ ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದು, 17 ಲಕ್ಷ ರೂ.ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ರೈಂ ಬ್ರಾಂಚ್ ಮೂರು ಮತ್ತು ಕಲಂಗುಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಅಪರಾಧ ವಿಭಾಗ ಮತ್ತು ಉತ್ತರ ಗೋವಾ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

ದಕ್ಷಿಣ ಗೋವಾದ ಕೆನಕೋನಾದಲ್ಲಿ 5.452 ಕೆ.ಜಿ ತೂಕದ ಗಾಂಜಾ, 636 ಗ್ರಾಂ ತೂಕದ ಕಪ್ಪು ಬಣ್ಣದ ಎಣ್ಣೆಯುಕ್ತ ವಸ್ತುವನ್ನು ಅಕ್ರಮವಾಗಿ ಹೊಂದಿದ್ದಕ್ಕಾಗಿ ದಕ್ಷಿಣ ಗೋವಾದ ಕೆನಕೋನಾದಿಂದ ಬೆನೆಡಿಟೊ ಫರ್ನಾಂಡಿಸ್ ಅವರನ್ನು ಅಪರಾಧ ವಿಭಾಗದ ಪೊಲೀಸ್ ಠಾಣೆ ಮಂಗಳವಾರ ಮಾದಕವಸ್ತು ದಾಳಿ ನಡೆಸಿ ಬಂಧಿಸಿದೆ ಎಂದು ವಾಸನ್ ಮಾಹಿತಿ ನೀಡಿದರು.

ಎರಡನೇ ಪ್ರಕರಣದಲ್ಲಿ ಕ್ರೈಂ ಬ್ರಾಂಚ್  ತಂಡವು ದಾಳಿ ನಡೆಸಿ 4.18 ಗ್ರಾಂ ತೂಕದ ನಿಷಿದ್ಧ ಕೊಕೇನ್ ಮತ್ತು 2.50 ಗ್ರಾಂ ತೂಕದ ಎಂಡಿಎಂಎ ಜೊತೆಗೆ ಮಾಪುಸಾದ ಮಲಿಕ್ ಸಯೀದ್ (28) ಎಂಬಾತನನ್ನು ಬಂಧಿಸಿದೆ.

ಕ್ರೈಂ ಬ್ರಾಂಚ್ ನ ಮೂರನೇ ಪ್ರಕರಣದಲ್ಲಿ, ಮಹಾರಾಷ್ಟ್ರದ ಅಹ್ಮದ್ ನಗರದ 52 ವರ್ಷದ ಅಶೋಕ್ ಲಗಾಡ್ ಎಂಬಾತ 2,25,000 ರೂ ಮೌಲ್ಯದ 2.250 ಕೆಜಿ ತೂಕದ ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದಾನೆ.

ಕಲಂಗುಟೆ ಪೊಲೀಸ್ ಠಾಣೆ ನಡೆಸಿದ ದಾಳಿಯಲ್ಲಿ ಶ್ರೀನಗರ ಮತ್ತು ಜಮ್ಮು ಮೂಲದ ವಸೀಂ ಭಟ್ ಮತ್ತು ಶಕೀಲ್ ಅಹ್ಮದ್ ಎಂಬ ಇಬ್ಬರು ವ್ಯಕ್ತಿಗಳು 225 ಗ್ರಾಂ ತೂಕದ ಕಪ್ಪು ಬಣ್ಣದ ಜಿಗುಟು ವಸ್ತು ಮತ್ತು 2,50,000 ರೂ ಮೌಲ್ಯದ 20 ಗ್ರಾಂ ತೂಕದ ಎಂಡಿಎಂಎ ಎಂದು ಶಂಕಿಸಲಾದ ಕಿತ್ತಳೆ ಬಣ್ಣದ ಪುಡಿಯಂತಹ ವಸ್ತುವನ್ನು ಹೊಂದಿರುವುದು ಕಂಡುಬಂದಿದೆ.

ಎಲ್ಲಾ ಪ್ರಕರಣಗಳನ್ನು ಎನ್ ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾಗಿದೆ. ಗೋವಾ ಪೊಲೀಸರು ಈ ಪ್ರಕರಣಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

22 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

32 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

37 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

45 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

54 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

58 mins ago