ಹೈದರಾಬಾದ್: ಹೈದರಾಬಾದ್ ಮೂಲದ ಚಲ್ಲಾ ಶ್ರೀನಿವಾಸ್ ಶಾಸ್ತ್ರೀ ಎಂಬ ರಾಮಭಕ್ತ ಶ್ರೀರಾಮನಿಗೆ ಆರ್ಪಣೆ ಮಾಡಲು ಚಿನ್ನಲೇಪಿತ ಪಾದುಕೆಗಳೊಂದಿಗೆ ರಾಮೇಶ್ವರದಿಂದ ಅಯೋಧ್ಯೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಮೂಲತಃ ಸೌಂಡ್ ಇಂಜಿನಿಯರ್ ಆಗಿರುವ ೫೪ ವರ್ಷದ ಶಾಸ್ತ್ರಿ ಜ.೨೨ರಂದು ನಡೆಯಲಿರುವ ರಾಮಮಂದಿರದ ಉದ್ಘಾಟನೆಗೂ ಮೊದಲೇ ಕಾಲ್ನಡಿಗೆಯಲ್ಲಿ ಅಯೋಧ್ಯೆ ತಲುಪಿದ್ದು, ರಾಮಮಂದಿರ ಹೋರಾಟದಲ್ಲಿ ಕರಸೇವಕರಾಗಿದ್ದ ತಮ್ಮ ತಂದೆಯ ಕನಸನ್ನು ನನಸು ಮಾಡುವ ಅವಕಾಶ ಸಿಕ್ಕಿದ್ದಕ್ಕಾಗಿ ಸಂತೋಷಿಸಿದ್ದಾರೆ.
ಇವರ ಪಾದಯಾತ್ರೆ ಜುಲೈ ೨೦ಕ್ಕೆ ಪ್ರಾರಂಭವಾಗಿದ್ದು, ವನವಾಸದ ಸಮಯದಲ್ಲಿ ಅಯೋಧ್ಯೆಯಿಂದ ರಾಮೇಶ್ವರ ಸೇರಲು ರಾಮ ತುಳಿದ ಹಾದಿಯನ್ನೇ ಹಿಡಿದು, ಶಿವಲಿಂಗಗಳ ದರ್ಶನ ಪಡೆಯುತ್ತಾ ಬಂದಿರುವುದಾಗಿ ಹೇಳಿದ್ದಾರೆ.
ಸಂಪೂರ್ಣ ಚಿನ್ನ ಲೇಪಿತ ಪಾದುಕೆಯು ಪಂಚಲೋಹಗಳಿಂದ ಮಾಡಲಾಗಿದ್ದು, ಅದನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಮೂಲಕ ಟ್ರಸ್ಟ್ ಗೆ ತಲುಪಿಸಿದ್ದಾರೆ.
ಪಾದುಕೆ ಸೇರಿ ದೇವಸ್ಥಾನಕ್ಕೆ ಸಲ್ಲಿಸಲಿರುವ ಆಭರಣ ಮತ್ತು ಪರಿಕರಗಳು ೬೫ ಲಕ್ಷ ಬೆಲೆಯವೆಂದು ಮಾಹಿತಿ ನೀಡಿದ್ದಾರೆ.
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…