Categories: ಗುಜರಾತ್

ಕಾಂಗ್ರೆಸ್ ಪಕ್ಷ ಹಿಂದು ಧರ್ಮಕ್ಕೆ ಧಕ್ಕೆ ತರಲು ಯತ್ನಿಸುತ್ತಿದೆ: ಹಾರ್ದಿಕ್ ಪಟೇಲ್

ಅಹಮದಾಬಾದ್: ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದರು.

ಕಾಂಗ್ರೆಸ್ ನಾಯಕ ಭರತ್‌ಸಿಂಗ್ ಸೋಲಂಕಿ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ಪಕ್ಷವು ಜನರ ಭಾವನೆಗಳಿಗೆ ಮತ್ತು ಹಿಂದು ಧರ್ಮದ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುತ್ತದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ರಾಮ ಮಂದಿರದ ಇಟ್ಟಿಗೆ ಮೇಲೆ ನಾಯಿ ಮೂತ್ರ ಮಾಡುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಗುಜರಾತ್ ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದ್ದಾರೆ!’ ಎಂದು ಟ್ವೀಟ್‌ನಲ್ಲಿ ಹಾರ್ದಿಕ್ ಉಲ್ಲೇಖಿಸಿದ್ದಾರೆ.

‘ಭಗವಾನ್ ಶ್ರೀರಾಮನೊಂದಿಗೆ ನಿಮಗೆ ಯಾವ ದ್ವೇಷವಿದೆ ಎಂದು ಕಾಂಗ್ರೆಸ್ ಮತ್ತು ಅದರ ನಾಯಕರನ್ನು ಕೇಳಲು ಬಯಸುತ್ತೇನೆ? ಹಿಂದುಗಳನ್ನು ನೀವು ಇಷ್ಟು ದ್ವೇಷಿಸುವುದೇಕೆ? ಶತಮಾನಗಳ ನಂತರ, ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಒಬಿಸಿ ಸಭೆ ಉದ್ದೇಶಿಸಿ ಮಾತನಾಡಿದ್ದ ಸೋಲಂಕಿ, ‘ಬಿಜೆಪಿ ರಾಮನ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುತ್ತಿದೆ. ಲಕ್ಷಾಂತರ ಹಿಂದುಗಳ ಭಾವನೆಯೊಂದಿಗೆ ಆಟವಾಡಿದೆ. 80ರ ದಶಕದ ಉತ್ತರಾರ್ಧದಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಜನರು ಶಿಲೆಗಾಗಿ ಬಹಳ ಗೌರವದಿಂದ ದೇಣಿಗೆ ನೀಡಿದ್ದರು. ಆದರೆ ಅವರು ಶಿಲೆಯನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಅಯೋಧ್ಯೆಯಲ್ಲಿ ಶಿಲೆಯ ಮೇಲೆ ನಾಯಿಗಳು ಮೂತ್ರ ಮಾಡುವುದು ಕಂಡುಬಂದಿದೆ’ ಎಂದು ಹೇಳಿದ್ದರು.

Gayathri SG

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

23 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

26 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

33 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

45 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

51 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

1 hour ago