News Karnataka Kannada
Monday, April 29 2024
ಗುಜರಾತ್

ಗುಜರಾತ್‌ನಲ್ಲಿ ರಥಯಾತ್ರೆ ವೇಳೆ ದಾಳಿ ಮಾಡಿದವರು ಜೈಲಿನಲ್ಲಿದ್ದಾರೆ: ಅಮಿತ್‌ ಶಾ

ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
Photo Credit :

ಅಹಮದಾಬಾದ್‌: ಗುಜರಾತ್‌ನಲ್ಲಿ ರಥಯಾತ್ರೆ ಸಂದರ್ಭದಲ್ಲಿ ದಾಳಿ ಮಾಡಿದವರನ್ನು ಜೈಲಿಗೆ ಕಳುಹಿಸಲಾಯಿತು. ಈಗ ಅವರು ಜೈಲಿನಲ್ಲಿ ‘ಜಗನ್ನಾಥ, ಜಗನ್ನಾಥ’ ಎಂದು ಜಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಗುಜರಾತ್‌ನಲ್ಲಿ 25 ಜಿಲ್ಲೆಗಳಲ್ಲಿ ಪೊಲೀಸರಿಗೆ ವಸತಿ ಹಾಗೂ ಕಚೇರಿ ಸಂಕೀರ್ಣಗಳನ್ನು ಲೋಕಾರ್ಪಣೆ ಮಾಡಿದ ಬಳಿಕ ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರವಿದ್ದಾಗ ಜಗನ್ನಾಥ ರಥಯಾತ್ರೆಯ ಮೇಲೆ ದಾಳಿ ಮಾಡಿದರು. ಈ ಘಟನೆ ವೇಳೆ ಕಾಂಗ್ರೆಸ್‌ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಯಿತು. ನಂತರ ಬಂದ ನರೇಂದ್ರ ಮೋದಿ ದಾಳಿ ಮಾಡಿದವರನ್ನು ಜೈಲಿಗೆ ಕಳುಹಿಸಿದರು. ಅವರು ಈಗ ಜೈಲಿನಲ್ಲಿ ‘ಜಗನ್ನಾಥ, ಜಗನ್ನಾಥ’ ಎಂದು ಜಪಿಸುತ್ತಿದ್ದಾರೆ ಎಂದರು.

ನಾನು ಕಾಂಗ್ರೆಸ್‌ ಆಡಳಿತವನ್ನು ನೋಡಿದ್ದೇನೆ, ಹಾಗೇ ಬಿಜೆಪಿ ಆಡಳಿತವನ್ನು ನೋಡಿದ್ದೇನೆ. ರಾಜ್ಯ 25 ವರ್ಷಗಳಲ್ಲಿ ಉತ್ತಮ ಬೆಳವಣಿಗೆ ಕಂಡಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಕೇವಲ ಕೋಮುಗಲಭೆಯಂತಹ ವಿಚಾರಗಳನ್ನು ಎತ್ತಿ ಜನರ ಮನಸನ್ನು ಕೆಡಿಸುತ್ತಿದೆ ಎಂದು ಅಮಿತ್‌ ಶಾ ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು