ಗುಜರಾತ್ : ಮೋರ್ಬಿಯಲ್ಲಿ ಕಾರ್ಖಾನೆ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಬುಧವಾರ ಮಧ್ಯಾಹ್ನ ಗುಜರಾತ್ನ ಮೊರ್ಬಿಯಲ್ಲಿ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದಾರೆಂದರೆ ಪೊಳೀಸರು ತಿಳಿಸಿದ್ದಾರೆ.
ಗುಜರಾತ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಕಾರ್ಪೊರೇಶನ್ (ಜಿಐಡಿಸಿ) ವ್ಯಾಪ್ತಿಯಲ್ಲಿರುವ ಹಲ್ವಾಡ್ ಕೈಗಾರಿಕಾ ಪ್ರದೇಶದ ಸಾಗರ್ ಸಾಲ್ಟ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.
ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತದ ಬಗ್ಗೆ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿದೆ. ಅವಶೇಷಗಳಡಿ ಸಿಲುಕಿರುವ ಇತರರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.
ಉಪ್ಪು ಕಾರ್ಖಾನೆಯಲ್ಲಿ ಗೋಡೆ ಕುಸಿದು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಸಚಿವ ಹಾಗೂ ಸ್ಥಳೀಯ ಶಾಸಕ ಬ್ರಿಜೇಶ್ ಮೆರ್ಜಾ ಖಚಿತಪಡಿಸಿದ್ದಾರೆ. “ಇತರರನ್ನು ರಕ್ಷಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಮೃತರ ಕುಟುಂಬಗಳೊಂದಿಗೆ ನಿಂತಿದೆ” ಎಂದು ಅವರು ತಿಳಿಸಿದ್ದಾರೆ.
ದುರಂತ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ದು:ಖ ಭರಿಸುವಂತ ಶಕ್ತಿ ಸಿಗಲಿ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ” ಎಂದ ಅವರು ”ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…