Categories: ಗುಜರಾತ್

ಡ್ರಗ್ಸ್‌ ಸಾಗಿಸುತ್ತಿದ್ದ 9 ಪಾಕಿಸ್ಥಾನೀಯರ ಬಂಧನ!

ಗುಜರಾತ್‌ : 280 ಕೋಟಿ ಮೌಲ್ಯದ 250 ಕೆಜಿ ಹೆರಾಯಿನ್‌ ಅನ್ನು ಭಾರತದ ಒಳಗೆ ತರಲು ಪ್ರಯತ್ನಿಸುತ್ತಿದ್ದ ಒಂಭತ್ತು ಜನ ಪಾಕಿಸ್ಥಾನಿ ನಾಗರೀಕರನ್ನು ಗುಜರಾತ್‌ ಎಟಿಎಸ್‌ ಮತ್ತು ಭಾರತಿಯ ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ಬಂಧಿಸಿದ್ದಾರೆ.

ರಕ್ಷಣಾ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ ಗುಜರಾತ್‌ ಪ್ರದೇಶದಲ್ಲಿ ಪಾಕಿಸ್ಥಾನಿ ಬೋಟ್‌ ʼಅಲ್‌ ಹಜ್‌ʼ ಅಂತರಾಷ್ಟ್ರೀಯ ಜಲರೇಖೆಗಳನ್ನು ದಾಟಿ ಭಾರತೀಯ ಗಡಿರೇಖೆಗಳನ್ನು ಪ್ರವೇಶಿಸಿತ್ತಿರುವುದು ಕಂಡುಬಂದಿದೆ.

ಈ ಸಂದರ್ಭದಲ್ಲಿ ಅವುಗಳ ತಪಾಸಣೆ ನಡೆಸಿದಾಗ ಅವುಗಳಲ್ಲಿ ಮಾದಕ ದ್ರವ್ಯ ಹೆರಾಯಿನ್‌ ಪತ್ತೆಯಾಗಿದೆ. ತಕ್ಷಣವೇ ದೋಣಿಯ 9 ಸಿಬ್ಬಂದಿಗಳನ್ನು ಬಂಧಿಸಿ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ.

ಇದು ಗುಜರಾತ್‌ ತೀರದಲ್ಲಿ ಕಂಡುಬರುತ್ತಿರುವ ಎರಡನೇ ಘಟನೆಯಾಗಿದೆ. ಕಳೆದವಾರವಷ್ಟೇ ಗುಜರಾತಿನ ಕಾಂಡ್ಲಾ ಬಂದರಿನಲ್ಲಿ ಒಟ್ಟೂ 1500 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ವರ್ಷದ ಫೆಬ್ರವರಿಯಲ್ಲಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಭಾರತೀಯ ನೌಕಾಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತ್ ಕರಾವಳಿಯಲ್ಲಿ ಹಡಗಿನಿಂದ ಸುಮಾರು 750 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದೇಶದ ಅತಿದೊಡ್ಡ ಡ್ರಗ್ ಸಾಗಣೆಯಲ್ಲಿ ಮುಂದ್ರಾ ಬಂದರಿನಲ್ಲಿ ಕಂಟೈನರ್‌ಗಳಿಂದ 21,000 ಕೋಟಿ ರೂಪಾಯಿ ಮೌಲ್ಯದ 3 ಟನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.

ಪ್ರಸ್ತುತ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಎನ್‌ಐಎ ಗೆ ಹಸ್ತಾಂತರಿಸಲಾಗಿದೆ. ಇವುಗಳ ಮಾರಾಟದಿಂದ ಬಂದ ಹಣ ಉಗ್ರಗರಿಗೆ ಸಂದಾಯವಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

Sneha Gowda

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

20 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

41 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

55 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

2 hours ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago